ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಸೂಚನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಎಲ್ಲರಿಗೂ ತಲುಪಿಸಿ ಎಂದು ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಗೆ ಸೂಚಿಸಿದರು. ವೇದಿಕೆ ಮತ್ತು ಧ್ವಜ ಕಟ್ಟೆ ಅಲಂಕಾರ, ಪಥ ಸಂಚಲನ, ವಿಡಿಯೋ ಮತ್ತು ಛಾಯಚಿತ್ರ, ಕನ್ನಡ ಸಾಹಿತ್ಯ ಪುಸ್ತಕ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಲಘು ಉಪಹಾರ, ನೀರಿನ ವ್ಯವಸ್ಥೆ, ಇತ್ಯಾದಿ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಗಳು ಕೈಗೊಳ್ಳುವಂತೆ ಸೂಚಿಸಿದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಆಯ್ಕೆ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸ್ವ ವಿವರಗಳೊಂದಿಗೆ ಅಕ್ಟೋಬರ್ 25 ರಂದು ಸಂಜೆ 5 ಗಂಟೆಯ ಒಳಗಾಗಿ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ ಇಲ್ಲಿಗೆ ಸಲ್ಲಿಸಲು ಅಗತ್ಯ ಕ್ರಮವಹಿಸಿ ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿ ಕುಮಾರ್ ಡಿ.ಎಂ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…