ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಸೂಚನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಎಲ್ಲರಿಗೂ ತಲುಪಿಸಿ ಎಂದು ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಗೆ ಸೂಚಿಸಿದರು. ವೇದಿಕೆ ಮತ್ತು ಧ್ವಜ ಕಟ್ಟೆ ಅಲಂಕಾರ, ಪಥ ಸಂಚಲನ, ವಿಡಿಯೋ ಮತ್ತು ಛಾಯಚಿತ್ರ, ಕನ್ನಡ ಸಾಹಿತ್ಯ ಪುಸ್ತಕ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಲಘು ಉಪಹಾರ, ನೀರಿನ ವ್ಯವಸ್ಥೆ, ಇತ್ಯಾದಿ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಗಳು ಕೈಗೊಳ್ಳುವಂತೆ ಸೂಚಿಸಿದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಆಯ್ಕೆ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸ್ವ ವಿವರಗಳೊಂದಿಗೆ ಅಕ್ಟೋಬರ್ 25 ರಂದು ಸಂಜೆ 5 ಗಂಟೆಯ ಒಳಗಾಗಿ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ ಇಲ್ಲಿಗೆ ಸಲ್ಲಿಸಲು ಅಗತ್ಯ ಕ್ರಮವಹಿಸಿ ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿ ಕುಮಾರ್ ಡಿ.ಎಂ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…