ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು.
ಸಾರ್ವಜನಿಕರಿಗೆ ಉಚಿತವಾಗಿ ತಜ್ಞ ವೈದ್ಯರಿಂದ ಮಧುಮೇಹ, ಬಿಪಿ(ರಕ್ತದೊತ್ತಡ) ತಪಾಸಣೆ, ಇಸಿಜಿ ತಪಾಸಣೆ, ಸಾಮಾನ್ಯ ತಪಾಸಣೆ ಸೇರಿದಂತೆ ಇತರೆ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ಕನ್ನಡ ರಾಜ್ಯೋತ್ಸವ ಅಂಗವಾಗಿ ಹೀಲಿನ್ ಆಸ್ಪತ್ರೆಯಲ್ಲಿ ಸಾರ್ವಜನಿಕರ ಒಳತಿಗಾಗಿ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬರವನ್ನು ಆಯೋಜನೆ ಮಾಡಲಾಗುವುದು ಎಂದರು.
ಪ್ರಸ್ತುತ ಚಳಿಗಾಲ ಪ್ರಾರಂಭವಾಗಿದೆ. ಚಳಿಗಾಲದಲ್ಲಿ ವಯಸ್ಸಾದವರು, ಶ್ವಾಸಕೋಶ ಸಮಸ್ಯೆ ಇರುವವರು, ಉಸಿರಾಟದ ಸಮಸ್ಯೆ ಇರುವವರು ಮುಂದಿನ ಫೆಬ್ರವರಿಯವರೆಗೆ ಸ್ವಲ್ಪ ಎಚ್ಚರದಿಂದ ಇರಬೇಕು. ಬಿಸಿ ನೀರು, ಬಿಸಿ ಊಟ, ಬಿಸಿನೀರಿನ ಸ್ನಾನ, ಬೆಚ್ಚನೆಯ ಹೊದಿಕೆಯನ್ನು ಬಳಸಬೇಕು.
ಈ ವೇಳೆ ಡಾ.ನವೀನ್ ಕುಮಾರ್ ಎನ್, ಡಾ.ತೇಜಸ್ ರಾಮ್, ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ರಂಜಿತ್, ಅರವಿಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…