ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು.
ಸಾರ್ವಜನಿಕರಿಗೆ ಉಚಿತವಾಗಿ ತಜ್ಞ ವೈದ್ಯರಿಂದ ಮಧುಮೇಹ, ಬಿಪಿ(ರಕ್ತದೊತ್ತಡ) ತಪಾಸಣೆ, ಇಸಿಜಿ ತಪಾಸಣೆ, ಸಾಮಾನ್ಯ ತಪಾಸಣೆ ಸೇರಿದಂತೆ ಇತರೆ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ಕನ್ನಡ ರಾಜ್ಯೋತ್ಸವ ಅಂಗವಾಗಿ ಹೀಲಿನ್ ಆಸ್ಪತ್ರೆಯಲ್ಲಿ ಸಾರ್ವಜನಿಕರ ಒಳತಿಗಾಗಿ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬರವನ್ನು ಆಯೋಜನೆ ಮಾಡಲಾಗುವುದು ಎಂದರು.
ಪ್ರಸ್ತುತ ಚಳಿಗಾಲ ಪ್ರಾರಂಭವಾಗಿದೆ. ಚಳಿಗಾಲದಲ್ಲಿ ವಯಸ್ಸಾದವರು, ಶ್ವಾಸಕೋಶ ಸಮಸ್ಯೆ ಇರುವವರು, ಉಸಿರಾಟದ ಸಮಸ್ಯೆ ಇರುವವರು ಮುಂದಿನ ಫೆಬ್ರವರಿಯವರೆಗೆ ಸ್ವಲ್ಪ ಎಚ್ಚರದಿಂದ ಇರಬೇಕು. ಬಿಸಿ ನೀರು, ಬಿಸಿ ಊಟ, ಬಿಸಿನೀರಿನ ಸ್ನಾನ, ಬೆಚ್ಚನೆಯ ಹೊದಿಕೆಯನ್ನು ಬಳಸಬೇಕು.
ಈ ವೇಳೆ ಡಾ.ನವೀನ್ ಕುಮಾರ್ ಎನ್, ಡಾ.ತೇಜಸ್ ರಾಮ್, ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ರಂಜಿತ್, ಅರವಿಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…