ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು.

ಸಾರ್ವಜನಿಕರಿಗೆ ಉಚಿತವಾಗಿ ತಜ್ಞ ವೈದ್ಯರಿಂದ ಮಧುಮೇಹ, ಬಿಪಿ(ರಕ್ತದೊತ್ತಡ) ತಪಾಸಣೆ, ಇಸಿಜಿ ತಪಾಸಣೆ, ಸಾಮಾನ್ಯ ತಪಾಸಣೆ ಸೇರಿದಂತೆ ಇತರೆ ಆರೋಗ್ಯ ತಪಾಸಣೆ ನಡೆಸಲಾಯಿತು.

ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ಕನ್ನಡ ರಾಜ್ಯೋತ್ಸವ ಅಂಗವಾಗಿ ಹೀಲಿನ್ ಆಸ್ಪತ್ರೆಯಲ್ಲಿ ಸಾರ್ವಜನಿಕರ ಒಳತಿಗಾಗಿ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಮುಂದಿನ‌ ದಿನಗಳಲ್ಲಿ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬರವನ್ನು ಆಯೋಜನೆ ಮಾಡಲಾಗುವುದು ಎಂದರು.

ಪ್ರಸ್ತುತ ಚಳಿಗಾಲ ಪ್ರಾರಂಭವಾಗಿದೆ. ಚಳಿಗಾಲದಲ್ಲಿ ವಯಸ್ಸಾದವರು, ಶ್ವಾಸಕೋಶ ಸಮಸ್ಯೆ ಇರುವವರು, ಉಸಿರಾಟದ ಸಮಸ್ಯೆ ಇರುವವರು ಮುಂದಿನ ಫೆಬ್ರವರಿಯವರೆಗೆ ಸ್ವಲ್ಪ ಎಚ್ಚರದಿಂದ ಇರಬೇಕು. ಬಿಸಿ ನೀರು, ಬಿಸಿ ಊಟ, ಬಿಸಿನೀರಿನ ಸ್ನಾನ, ಬೆಚ್ಚನೆಯ ಹೊದಿಕೆಯನ್ನು ಬಳಸಬೇಕು.

ಈ ವೇಳೆ ಡಾ.ನವೀನ್ ಕುಮಾರ್ ಎನ್, ಡಾ.ತೇಜಸ್ ರಾಮ್, ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ರಂಜಿತ್, ಅರವಿಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

4 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

4 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

7 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago