ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು.

ಸಾರ್ವಜನಿಕರಿಗೆ ಉಚಿತವಾಗಿ ತಜ್ಞ ವೈದ್ಯರಿಂದ ಮಧುಮೇಹ, ಬಿಪಿ(ರಕ್ತದೊತ್ತಡ) ತಪಾಸಣೆ, ಇಸಿಜಿ ತಪಾಸಣೆ, ಸಾಮಾನ್ಯ ತಪಾಸಣೆ ಸೇರಿದಂತೆ ಇತರೆ ಆರೋಗ್ಯ ತಪಾಸಣೆ ನಡೆಸಲಾಯಿತು.

ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ಕನ್ನಡ ರಾಜ್ಯೋತ್ಸವ ಅಂಗವಾಗಿ ಹೀಲಿನ್ ಆಸ್ಪತ್ರೆಯಲ್ಲಿ ಸಾರ್ವಜನಿಕರ ಒಳತಿಗಾಗಿ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಮುಂದಿನ‌ ದಿನಗಳಲ್ಲಿ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬರವನ್ನು ಆಯೋಜನೆ ಮಾಡಲಾಗುವುದು ಎಂದರು.

ಪ್ರಸ್ತುತ ಚಳಿಗಾಲ ಪ್ರಾರಂಭವಾಗಿದೆ. ಚಳಿಗಾಲದಲ್ಲಿ ವಯಸ್ಸಾದವರು, ಶ್ವಾಸಕೋಶ ಸಮಸ್ಯೆ ಇರುವವರು, ಉಸಿರಾಟದ ಸಮಸ್ಯೆ ಇರುವವರು ಮುಂದಿನ ಫೆಬ್ರವರಿಯವರೆಗೆ ಸ್ವಲ್ಪ ಎಚ್ಚರದಿಂದ ಇರಬೇಕು. ಬಿಸಿ ನೀರು, ಬಿಸಿ ಊಟ, ಬಿಸಿನೀರಿನ ಸ್ನಾನ, ಬೆಚ್ಚನೆಯ ಹೊದಿಕೆಯನ್ನು ಬಳಸಬೇಕು.

ಈ ವೇಳೆ ಡಾ.ನವೀನ್ ಕುಮಾರ್ ಎನ್, ಡಾ.ತೇಜಸ್ ರಾಮ್, ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ರಂಜಿತ್, ಅರವಿಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

16 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago