ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು.
ಸಾರ್ವಜನಿಕರಿಗೆ ಉಚಿತವಾಗಿ ತಜ್ಞ ವೈದ್ಯರಿಂದ ಮಧುಮೇಹ, ಬಿಪಿ(ರಕ್ತದೊತ್ತಡ) ತಪಾಸಣೆ, ಇಸಿಜಿ ತಪಾಸಣೆ, ಸಾಮಾನ್ಯ ತಪಾಸಣೆ ಸೇರಿದಂತೆ ಇತರೆ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ಕನ್ನಡ ರಾಜ್ಯೋತ್ಸವ ಅಂಗವಾಗಿ ಹೀಲಿನ್ ಆಸ್ಪತ್ರೆಯಲ್ಲಿ ಸಾರ್ವಜನಿಕರ ಒಳತಿಗಾಗಿ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬರವನ್ನು ಆಯೋಜನೆ ಮಾಡಲಾಗುವುದು ಎಂದರು.
ಪ್ರಸ್ತುತ ಚಳಿಗಾಲ ಪ್ರಾರಂಭವಾಗಿದೆ. ಚಳಿಗಾಲದಲ್ಲಿ ವಯಸ್ಸಾದವರು, ಶ್ವಾಸಕೋಶ ಸಮಸ್ಯೆ ಇರುವವರು, ಉಸಿರಾಟದ ಸಮಸ್ಯೆ ಇರುವವರು ಮುಂದಿನ ಫೆಬ್ರವರಿಯವರೆಗೆ ಸ್ವಲ್ಪ ಎಚ್ಚರದಿಂದ ಇರಬೇಕು. ಬಿಸಿ ನೀರು, ಬಿಸಿ ಊಟ, ಬಿಸಿನೀರಿನ ಸ್ನಾನ, ಬೆಚ್ಚನೆಯ ಹೊದಿಕೆಯನ್ನು ಬಳಸಬೇಕು.
ಈ ವೇಳೆ ಡಾ.ನವೀನ್ ಕುಮಾರ್ ಎನ್, ಡಾ.ತೇಜಸ್ ರಾಮ್, ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ರಂಜಿತ್, ಅರವಿಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…