ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು.
ಸಾರ್ವಜನಿಕರಿಗೆ ಉಚಿತವಾಗಿ ತಜ್ಞ ವೈದ್ಯರಿಂದ ಮಧುಮೇಹ, ಬಿಪಿ(ರಕ್ತದೊತ್ತಡ) ತಪಾಸಣೆ, ಇಸಿಜಿ ತಪಾಸಣೆ, ಸಾಮಾನ್ಯ ತಪಾಸಣೆ ಸೇರಿದಂತೆ ಇತರೆ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ಕನ್ನಡ ರಾಜ್ಯೋತ್ಸವ ಅಂಗವಾಗಿ ಹೀಲಿನ್ ಆಸ್ಪತ್ರೆಯಲ್ಲಿ ಸಾರ್ವಜನಿಕರ ಒಳತಿಗಾಗಿ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬರವನ್ನು ಆಯೋಜನೆ ಮಾಡಲಾಗುವುದು ಎಂದರು.
ಪ್ರಸ್ತುತ ಚಳಿಗಾಲ ಪ್ರಾರಂಭವಾಗಿದೆ. ಚಳಿಗಾಲದಲ್ಲಿ ವಯಸ್ಸಾದವರು, ಶ್ವಾಸಕೋಶ ಸಮಸ್ಯೆ ಇರುವವರು, ಉಸಿರಾಟದ ಸಮಸ್ಯೆ ಇರುವವರು ಮುಂದಿನ ಫೆಬ್ರವರಿಯವರೆಗೆ ಸ್ವಲ್ಪ ಎಚ್ಚರದಿಂದ ಇರಬೇಕು. ಬಿಸಿ ನೀರು, ಬಿಸಿ ಊಟ, ಬಿಸಿನೀರಿನ ಸ್ನಾನ, ಬೆಚ್ಚನೆಯ ಹೊದಿಕೆಯನ್ನು ಬಳಸಬೇಕು.
ಈ ವೇಳೆ ಡಾ.ನವೀನ್ ಕುಮಾರ್ ಎನ್, ಡಾ.ತೇಜಸ್ ರಾಮ್, ಆಸ್ಪತ್ರೆ ಮಾಲೀಕ ಡಾ.ವೆಂಕಟೇಶ್ ಪ್ರಸಾದ್, ರಂಜಿತ್, ಅರವಿಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…