ದೊಡ್ಡಬಳ್ಳಾಪುರ ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರಿಗೆ 2025ನೇ ಸಾಲಿನ ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಸಿಂಪಾಡಿಪುರ ಗ್ರಾಮದಲ್ಲಿ ವೀಣೆ ತಯಾರಿಕೆಯ ಪರಂಪರೆಯನ್ನು ಪ್ರಾರಂಭಿಸಿದ ಪೆನ್ನ ಒಬಳಯ್ಯ ಅವರು ವೀಣೆ ತಯಾರಕರಲ್ಲಿ ಕೆಲಸ ಮಾಡುತ್ತಾ ಕಲೆಯನ್ನು ಕಲಿತರು ಮತ್ತು ನಂತರ ತಮ್ಮ ಗ್ರಾಮ ಸಿಂಪಾಡಿಪುರಕ್ಕೆ ಬಂದು ಈ ಕರಕುಶಲತೆಯನ್ನು ಗ್ರಾಮಸ್ಥರಿಗೆ ಕಲಿಸಿದರು.
50 ವರ್ಷಗಳಿಂದಲೂ ವೀಣೆ ತಯಾರಿಸುತ್ತಾ ಬಂದಿರುವ ಈ ಗ್ರಾಮವು ಈಗಲೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಮೈಸೂರು ವೀಣೆಗಳನ್ನು ಇಲ್ಲಿ ತಯಾರಿಸಲಾಗುತ್ತದೆ. ವೀಣೆ ತಯಾರಿಕೆಯ ಪರಂಪರೆಯನ್ನು ಮುಂದುವರಿಸಲು ಹೊಸ ತಲೆಮಾರಿನ ಪ್ರತಿಭೆಗಳು ಈ ಕರಕುಶಲತೆಯನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿವೆ.
ಸಿಂಪಾಡಿಪುರ ಗ್ರಾಮದಲ್ಲಿತ ಯಾರಾಗುವ ವೀಣೆಗಳು ಹೆಸರಾಂತ ಸಂಗೀತ ಕಲಾವಿದರ ಕೈಯಲ್ಲಿವೆ. ಸಾಮಾನ್ಯವಾಗಿ ವೀಣೆಗಳು ಸಿದ್ಧಗೊಳ್ಳುವುದು ತಮಿಳುನಾಡಿನ ತಂಜಾವೂರಿನಲ್ಲಿ, ನಂತರ ವೀಣೆ ತಯಾರಿಕೆಯಲ್ಲಿ ಗಮನ ಸೆಳೆದಿರುವುದು ಬೆಂಗಳೂರು ಬಳಿಯ ಸಿಂಪಾಡಿಪುರ ಗ್ರಾಮ. ಕಳೆದ ಐವತ್ತು ವರ್ಷಗಳಿಂದ, ಈ ಊರಿನಲ್ಲಿ ವೀಣೆ ಮತ್ತು ತಂಬೂರಿಗಳನ್ನು ತಯಾರು ಮಾಡುತ್ತಿದ್ದಾರೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…