ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ದೊಡ್ಡಬಳ್ಳಾಪುರದ ವೀಣೆ ತಯಾರಕ ಪೆನ್ನ ಓಬಳಯ್ಯ ಆಯ್ಕೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರಿಗೆ 2025ನೇ ಸಾಲಿನ ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ದೊಡ್ಡಬಳ್ಳಾಪುರ‌ ತಾಲ್ಲೂಕಿನ ಮಧುರೆ ಹೋಬಳಿಯ   ಸಿಂಪಾಡಿಪುರ ಗ್ರಾಮದಲ್ಲಿ ವೀಣೆ ತಯಾರಿಕೆಯ ಪರಂಪರೆಯನ್ನು ಪ್ರಾರಂಭಿಸಿದ ಪೆನ್ನ ಒಬಳಯ್ಯ ಅವರು ವೀಣೆ ತಯಾರಕರಲ್ಲಿ ಕೆಲಸ ಮಾಡುತ್ತಾ ಕಲೆಯನ್ನು ಕಲಿತರು ಮತ್ತು ನಂತರ ತಮ್ಮ ಗ್ರಾಮ ಸಿಂಪಾಡಿಪುರಕ್ಕೆ ಬಂದು ಈ ಕರಕುಶಲತೆಯನ್ನು ಗ್ರಾಮಸ್ಥರಿಗೆ ಕಲಿಸಿದರು.

50 ವರ್ಷಗಳಿಂದಲೂ ವೀಣೆ ತಯಾರಿಸುತ್ತಾ ಬಂದಿರುವ ಈ ಗ್ರಾಮವು ಈಗಲೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಮೈಸೂರು ವೀಣೆಗಳನ್ನು ಇಲ್ಲಿ ತಯಾರಿಸಲಾಗುತ್ತದೆ. ವೀಣೆ ತಯಾರಿಕೆಯ ಪರಂಪರೆಯನ್ನು ಮುಂದುವರಿಸಲು ಹೊಸ ತಲೆಮಾರಿನ ಪ್ರತಿಭೆಗಳು ಈ ಕರಕುಶಲತೆಯನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿವೆ.

ಸಿಂಪಾಡಿಪುರ ಗ್ರಾಮದಲ್ಲಿತ ಯಾರಾಗುವ ವೀಣೆಗಳು ಹೆಸರಾಂತ ಸಂಗೀತ ಕಲಾವಿದರ ಕೈಯಲ್ಲಿವೆ. ಸಾಮಾನ್ಯವಾಗಿ ವೀಣೆಗಳು ಸಿದ್ಧಗೊಳ್ಳುವುದು ತಮಿಳುನಾಡಿನ ತಂಜಾವೂರಿನಲ್ಲಿ, ನಂತರ ವೀಣೆ ತಯಾರಿಕೆಯಲ್ಲಿ ಗಮನ ಸೆಳೆದಿರುವುದು ಬೆಂಗಳೂರು ಬಳಿಯ ಸಿಂಪಾಡಿಪುರ ಗ್ರಾಮ. ಕಳೆದ ಐವತ್ತು ವರ್ಷಗಳಿಂದ, ಈ ಊರಿನಲ್ಲಿ ವೀಣೆ ಮತ್ತು ತಂಬೂರಿಗಳನ್ನು ತಯಾರು ಮಾಡುತ್ತಿದ್ದಾರೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

47 minutes ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

7 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

22 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago