ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ದೊಡ್ಡಬಳ್ಳಾಪುರದ ವೀಣೆ ತಯಾರಕ ಪೆನ್ನ ಓಬಳಯ್ಯ ಆಯ್ಕೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರಿಗೆ 2025ನೇ ಸಾಲಿನ ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ದೊಡ್ಡಬಳ್ಳಾಪುರ‌ ತಾಲ್ಲೂಕಿನ ಮಧುರೆ ಹೋಬಳಿಯ   ಸಿಂಪಾಡಿಪುರ ಗ್ರಾಮದಲ್ಲಿ ವೀಣೆ ತಯಾರಿಕೆಯ ಪರಂಪರೆಯನ್ನು ಪ್ರಾರಂಭಿಸಿದ ಪೆನ್ನ ಒಬಳಯ್ಯ ಅವರು ವೀಣೆ ತಯಾರಕರಲ್ಲಿ ಕೆಲಸ ಮಾಡುತ್ತಾ ಕಲೆಯನ್ನು ಕಲಿತರು ಮತ್ತು ನಂತರ ತಮ್ಮ ಗ್ರಾಮ ಸಿಂಪಾಡಿಪುರಕ್ಕೆ ಬಂದು ಈ ಕರಕುಶಲತೆಯನ್ನು ಗ್ರಾಮಸ್ಥರಿಗೆ ಕಲಿಸಿದರು.

50 ವರ್ಷಗಳಿಂದಲೂ ವೀಣೆ ತಯಾರಿಸುತ್ತಾ ಬಂದಿರುವ ಈ ಗ್ರಾಮವು ಈಗಲೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಮೈಸೂರು ವೀಣೆಗಳನ್ನು ಇಲ್ಲಿ ತಯಾರಿಸಲಾಗುತ್ತದೆ. ವೀಣೆ ತಯಾರಿಕೆಯ ಪರಂಪರೆಯನ್ನು ಮುಂದುವರಿಸಲು ಹೊಸ ತಲೆಮಾರಿನ ಪ್ರತಿಭೆಗಳು ಈ ಕರಕುಶಲತೆಯನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿವೆ.

ಸಿಂಪಾಡಿಪುರ ಗ್ರಾಮದಲ್ಲಿತ ಯಾರಾಗುವ ವೀಣೆಗಳು ಹೆಸರಾಂತ ಸಂಗೀತ ಕಲಾವಿದರ ಕೈಯಲ್ಲಿವೆ. ಸಾಮಾನ್ಯವಾಗಿ ವೀಣೆಗಳು ಸಿದ್ಧಗೊಳ್ಳುವುದು ತಮಿಳುನಾಡಿನ ತಂಜಾವೂರಿನಲ್ಲಿ, ನಂತರ ವೀಣೆ ತಯಾರಿಕೆಯಲ್ಲಿ ಗಮನ ಸೆಳೆದಿರುವುದು ಬೆಂಗಳೂರು ಬಳಿಯ ಸಿಂಪಾಡಿಪುರ ಗ್ರಾಮ. ಕಳೆದ ಐವತ್ತು ವರ್ಷಗಳಿಂದ, ಈ ಊರಿನಲ್ಲಿ ವೀಣೆ ಮತ್ತು ತಂಬೂರಿಗಳನ್ನು ತಯಾರು ಮಾಡುತ್ತಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

21 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

3 days ago