ಕನ್ನಡ ಸಾಹಿತ್ಯಕ್ಕೆ ಕುವೆಂಪು ಕೊಡುಗೆ ಅನನ್ಯ- ಜಿ.ಎಸ್.ಸ್ಮಿತಾ

ಕುವೆಂಪು ಅವರ ಸಾಹಿತ್ಯವು ವೈಚಾರಿಕತೆಯಿಂದ ಹಿಡಿದು ಆಧ್ಯಾತ್ಮಿಕತೆಯ ತನಕ ಎಲ್ಲಾ ವಿಚಾರಗಳನ್ನು ಒಳಗೊಂಡಿದೆ. ಜನಸಾಮಾನ್ಯರನ್ನು ಶ್ರೀಸಾಮಾನ್ಯ ಎಂದು ಕರೆದ ಕುವೆಂಪು ಅವರು ಶತಮಾನದ ಶ್ರೇಷ್ಠ ಸಾಹಿತಿಯಾಗಿದ್ದಾರೆ ಎಂದು ದೊಡ್ಡಬಳ್ಳಾಪುರ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಂಸ್ಕೃತಿ ಟ್ರಸ್ಟ್ ಸಹಯೋಗದಲ್ಲಿ ಡಾ.ಹುಲಿಕಲ್ ನಟರಾಜು ಮನೆಯಲ್ಲಿ ನಡೆದ ಮನೆಯಂಗಳದಲ್ಲಿ ಕನ್ನಡದ ಗಾನ ಪಯಣ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ಕಾವ್ಯ ಕುರಿತು ಮಾತನಾಡಿದರು.

ಸಮಸಮಾಜ ನಿರ್ಮಾಣವಾಗಬೇಕು, ಸಾಹಿತ್ಯ ಜನಸಾಮಾನ್ಯರನ್ನು ತಲುಪುಬೇಕು. ಮೌಢ್ಯತೆ, ಕಂದಾಚಾರ, ಅಂಧಭಕ್ತಿಯಿಂದ ಜನರು ಹೊರಬಂದು ನಿಜ ದೇಶಭಕ್ತಿ ಮತ್ತು ವಿಶ್ವಮಾನವ ಪ್ರಜ್ಞೆ. ನಾಡು ನುಡಿ, ದೇಶಪ್ರೇಮ, ವಿಶ್ವಮಾನವತೆ, ಪ್ರಕೃತಿ ಸೌಂದರ್ಯ, ಸಾಮಾಜಿಕ ಪ್ರಜ್ಞೆ, ಜನಸಾಮಾನ್ಯರ ಬದುಕು ಬವಣೆಗಳನ್ನು ಕುವೆಂಪು ತಮ್ಮ ಕೃತಿಗಳಲ್ಲಿ  ಅನಾವಣಗೊಳಿಸಿದ್ದಾರೆ ಎಂದರು.

ಮಕ್ಕಳ ಸಾಹಿತ್ಯ ಬೊಮ್ಮನಹಳ್ಳಿ ಕಿಂದರಜೋಗಿಯಿಂದ ಹಿಡಿದು ಮಹಾಕಾವ್ಯ ಶ್ರೀರಾಮಾಯಣದರ್ಶನಂ ತನಕ ಕುವೆಂಪು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ. ಕುವೆಂಪು ಅವರ ಸಾಹಿತ್ಯ ಸಮಾಜಮುಖಿ, ಸಮಾಜ ಪರಿವರ್ತನೆ ಸಹಕಾರಿಯಾಗಿದೆ ಎಂದರು.

ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು, ನೇಗಿಲಮೇಲೆ ನಿಂತಿದೆ ಧರ್ಮ, ಮಂತ್ರಮಾಂಗಲ್ಯ, ವಿಶ್ವ ಮಾನವ ಸಂದೇಶ ಮುಂತಾದ ಉನ್ನತ ಮೌಲ್ಯಗಳನ್ನು ಪ್ರತಿಪಾದಿಸಿದ ಕುವೆಂಪು ಅವರು ಕನ್ನಡ ಸಾಹಿತ್ಯವನ್ನು ವಿಶ್ವಮಾನ್ಯಗೊಳಿಸಿದರು ಎಂದರು.

ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಕನ್ನಡ ಅಧ್ಯಾಪಕ ಹೆಗಡೆ ಮಾತನಾಡಿ, ಕುವೆಂಪು ಅವರ ಸೃಜನಶೀಲ ಪ್ರತಿಭೆ ಸಾಕ್ಷಿ ಎಂದರೆ ಪಕ್ಷಿಗಳ ಹಾರಾಟ ನೋಡಿದ  ದೇವರು ರುಜು ಮಾಡಿದನು ಎಂಬ ರೂಪಕದಲ್ಲಿ ನೋಡಬಹುದಾಗಿದೆ. ನೂರು ದೇವರನೆಲ್ಲ ನೂಕಾಚೆ ದೂರ ಭಾರತಾಂಬೆಯೇ ದೇವಿ ಪೂಜಿಸುವ ಬಾರಾ ಕವಿತೆಯ ಸಾಲು ನಿಜದೇಶಭಕ್ತಿಯನ್ನು ಪ್ರತಿಪಾದಿಸುತ್ತವೆ. ಜೀವಪರವಾದ ಕುವೆಂಪು ಸ್ತ್ರೀಪರ ನಿಲುವುಗಳನ್ನು ಮಹಾಕಾವ್ಯದಲ್ಲಿ ಬರುವ ಮಂಥರೆ, ಊರ್ವಿಳೆ ಪಾತ್ರಗಳಲ್ಲಿ ಕಾಣಬಹುದಾಗಿದೆ. ಕುವೆಂಪು ಅವರ ಸಾಹಿತ್ಯ ಸಾಮಾಜಿಕ ಬದಲಾವಣೆಗೆ ಪ್ರೇರಕಶಕ್ತಿಯಾಗಿದೆ ಎಂದರು.

ಕುವೆಂಪು ಅವರ ಭಾವಗೀತೆಗಳನ್ನು ಕಲಾವಿದರಾದ ರವಿರಾಜ್,  ನಾಗರತ್ಮ‌ಮಹಾಬಲೇಶ್ವರ್, ಚಂದ್ರಶೇಖರ್, ನಾಗರತ್ನಮ್ಮ, ಎಂ.ಪಿ.ಸಿ.ವೆಂಕಟೇಶ್, ಷಫೀರ್, ನಾಗದಳ ನಟರಾಜ್, ದರ್ಗಾಜೋಗಿಹಳ್ಳಿ ಮಲ್ಲೇಶ್     ಮುಂತಾದವರು ಹಾಡಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಫೋಟೋಗ್ರಾಫರ್ ಸಂಘದ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಸಂಪತ್ತಕುಮಾರ್ ಅವರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನೆ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ಗೌರವ ಅಧ್ಯಕ್ಷ. ಕಂಟನುಕುಂಟೆ ಕೃಷ್ಣಮೂರ್ತಿ, ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್,  ನಿವೃತ್ತ ಪ್ರಾಂಶುಪಾಲ ಮೇಜರ್ ಎಸ್.ಮಹಾಬಲೇಶ್ವರ್, ಲಯನ್ಸ್ ಕ್ಲಬ್ ‌ಕೋಶಾಧ್ಯಕ್ಷ ಕೆ.ಪಿ.ಲಕ್ಷ್ಮೀನಾರಾಯಣ್, ಮಾಜಿ ಅಧ್ಯಕ್ಷ ಆರ್
ಎಸ್.ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮತ್ತು  ಪದಾಧಿಕಾರಿಗಳು, ಸಂಸ್ಕೃತಿ ಟ್ರಸ್ಟ್ ಅಧ್ಯಕ್ಷ ಎಚ್.ಎಸ್.ನಾಗೇಶ್ ಮತ್ತು ಪದಾಧಿಕಾರಿಗಳು ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

9 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

10 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

15 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

17 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

20 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

21 hours ago