ಕನ್ನಡ ಸಾಹಿತ್ಯಕ್ಕೆ ಕುವೆಂಪು ಕೊಡುಗೆ ಅನನ್ಯ- ಜಿ.ಎಸ್.ಸ್ಮಿತಾ

ಕುವೆಂಪು ಅವರ ಸಾಹಿತ್ಯವು ವೈಚಾರಿಕತೆಯಿಂದ ಹಿಡಿದು ಆಧ್ಯಾತ್ಮಿಕತೆಯ ತನಕ ಎಲ್ಲಾ ವಿಚಾರಗಳನ್ನು ಒಳಗೊಂಡಿದೆ. ಜನಸಾಮಾನ್ಯರನ್ನು ಶ್ರೀಸಾಮಾನ್ಯ ಎಂದು ಕರೆದ ಕುವೆಂಪು ಅವರು ಶತಮಾನದ ಶ್ರೇಷ್ಠ ಸಾಹಿತಿಯಾಗಿದ್ದಾರೆ ಎಂದು ದೊಡ್ಡಬಳ್ಳಾಪುರ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಂಸ್ಕೃತಿ ಟ್ರಸ್ಟ್ ಸಹಯೋಗದಲ್ಲಿ ಡಾ.ಹುಲಿಕಲ್ ನಟರಾಜು ಮನೆಯಲ್ಲಿ ನಡೆದ ಮನೆಯಂಗಳದಲ್ಲಿ ಕನ್ನಡದ ಗಾನ ಪಯಣ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ಕಾವ್ಯ ಕುರಿತು ಮಾತನಾಡಿದರು.

ಸಮಸಮಾಜ ನಿರ್ಮಾಣವಾಗಬೇಕು, ಸಾಹಿತ್ಯ ಜನಸಾಮಾನ್ಯರನ್ನು ತಲುಪುಬೇಕು. ಮೌಢ್ಯತೆ, ಕಂದಾಚಾರ, ಅಂಧಭಕ್ತಿಯಿಂದ ಜನರು ಹೊರಬಂದು ನಿಜ ದೇಶಭಕ್ತಿ ಮತ್ತು ವಿಶ್ವಮಾನವ ಪ್ರಜ್ಞೆ. ನಾಡು ನುಡಿ, ದೇಶಪ್ರೇಮ, ವಿಶ್ವಮಾನವತೆ, ಪ್ರಕೃತಿ ಸೌಂದರ್ಯ, ಸಾಮಾಜಿಕ ಪ್ರಜ್ಞೆ, ಜನಸಾಮಾನ್ಯರ ಬದುಕು ಬವಣೆಗಳನ್ನು ಕುವೆಂಪು ತಮ್ಮ ಕೃತಿಗಳಲ್ಲಿ  ಅನಾವಣಗೊಳಿಸಿದ್ದಾರೆ ಎಂದರು.

ಮಕ್ಕಳ ಸಾಹಿತ್ಯ ಬೊಮ್ಮನಹಳ್ಳಿ ಕಿಂದರಜೋಗಿಯಿಂದ ಹಿಡಿದು ಮಹಾಕಾವ್ಯ ಶ್ರೀರಾಮಾಯಣದರ್ಶನಂ ತನಕ ಕುವೆಂಪು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ. ಕುವೆಂಪು ಅವರ ಸಾಹಿತ್ಯ ಸಮಾಜಮುಖಿ, ಸಮಾಜ ಪರಿವರ್ತನೆ ಸಹಕಾರಿಯಾಗಿದೆ ಎಂದರು.

ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು, ನೇಗಿಲಮೇಲೆ ನಿಂತಿದೆ ಧರ್ಮ, ಮಂತ್ರಮಾಂಗಲ್ಯ, ವಿಶ್ವ ಮಾನವ ಸಂದೇಶ ಮುಂತಾದ ಉನ್ನತ ಮೌಲ್ಯಗಳನ್ನು ಪ್ರತಿಪಾದಿಸಿದ ಕುವೆಂಪು ಅವರು ಕನ್ನಡ ಸಾಹಿತ್ಯವನ್ನು ವಿಶ್ವಮಾನ್ಯಗೊಳಿಸಿದರು ಎಂದರು.

ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಕನ್ನಡ ಅಧ್ಯಾಪಕ ಹೆಗಡೆ ಮಾತನಾಡಿ, ಕುವೆಂಪು ಅವರ ಸೃಜನಶೀಲ ಪ್ರತಿಭೆ ಸಾಕ್ಷಿ ಎಂದರೆ ಪಕ್ಷಿಗಳ ಹಾರಾಟ ನೋಡಿದ  ದೇವರು ರುಜು ಮಾಡಿದನು ಎಂಬ ರೂಪಕದಲ್ಲಿ ನೋಡಬಹುದಾಗಿದೆ. ನೂರು ದೇವರನೆಲ್ಲ ನೂಕಾಚೆ ದೂರ ಭಾರತಾಂಬೆಯೇ ದೇವಿ ಪೂಜಿಸುವ ಬಾರಾ ಕವಿತೆಯ ಸಾಲು ನಿಜದೇಶಭಕ್ತಿಯನ್ನು ಪ್ರತಿಪಾದಿಸುತ್ತವೆ. ಜೀವಪರವಾದ ಕುವೆಂಪು ಸ್ತ್ರೀಪರ ನಿಲುವುಗಳನ್ನು ಮಹಾಕಾವ್ಯದಲ್ಲಿ ಬರುವ ಮಂಥರೆ, ಊರ್ವಿಳೆ ಪಾತ್ರಗಳಲ್ಲಿ ಕಾಣಬಹುದಾಗಿದೆ. ಕುವೆಂಪು ಅವರ ಸಾಹಿತ್ಯ ಸಾಮಾಜಿಕ ಬದಲಾವಣೆಗೆ ಪ್ರೇರಕಶಕ್ತಿಯಾಗಿದೆ ಎಂದರು.

ಕುವೆಂಪು ಅವರ ಭಾವಗೀತೆಗಳನ್ನು ಕಲಾವಿದರಾದ ರವಿರಾಜ್,  ನಾಗರತ್ಮ‌ಮಹಾಬಲೇಶ್ವರ್, ಚಂದ್ರಶೇಖರ್, ನಾಗರತ್ನಮ್ಮ, ಎಂ.ಪಿ.ಸಿ.ವೆಂಕಟೇಶ್, ಷಫೀರ್, ನಾಗದಳ ನಟರಾಜ್, ದರ್ಗಾಜೋಗಿಹಳ್ಳಿ ಮಲ್ಲೇಶ್     ಮುಂತಾದವರು ಹಾಡಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಫೋಟೋಗ್ರಾಫರ್ ಸಂಘದ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಸಂಪತ್ತಕುಮಾರ್ ಅವರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನೆ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ಗೌರವ ಅಧ್ಯಕ್ಷ. ಕಂಟನುಕುಂಟೆ ಕೃಷ್ಣಮೂರ್ತಿ, ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್,  ನಿವೃತ್ತ ಪ್ರಾಂಶುಪಾಲ ಮೇಜರ್ ಎಸ್.ಮಹಾಬಲೇಶ್ವರ್, ಲಯನ್ಸ್ ಕ್ಲಬ್ ‌ಕೋಶಾಧ್ಯಕ್ಷ ಕೆ.ಪಿ.ಲಕ್ಷ್ಮೀನಾರಾಯಣ್, ಮಾಜಿ ಅಧ್ಯಕ್ಷ ಆರ್
ಎಸ್.ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮತ್ತು  ಪದಾಧಿಕಾರಿಗಳು, ಸಂಸ್ಕೃತಿ ಟ್ರಸ್ಟ್ ಅಧ್ಯಕ್ಷ ಎಚ್.ಎಸ್.ನಾಗೇಶ್ ಮತ್ತು ಪದಾಧಿಕಾರಿಗಳು ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

6 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

7 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

8 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

9 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

13 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

14 hours ago