ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯವಾಗಿದೆ. ಬಾನು ಮುಸ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ಬರುವ ಮೂಲಕ ಕನ್ನಡ ಮಹಿಳಾ ಸಾಹಿತಿಗಳಿಗೆ ವಿಶ್ವ ಮನ್ನಣೆ ದೊರೆಯುವಂತಾಗಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹದೇವ್ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಜ್ಞಾನಗಂಗಾ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಎಂದರು.
ಕನ್ನಡ ಸಾಹಿತ್ಯದಲ್ಲಿ ಮೊದಲಿನಿಂದಲೂ ಮಹಿಳಾ ಸಾಹಿತಿಗಳು ಸಾಮಾಜಿಕ ಅಸಮಾನತೆಯ ವಿರುದ್ದ ಧ್ವನಿ ಎತ್ತಿದ್ದಾರೆ. ಅಕ್ಕಮಹಾದೇವಿ, ಸಂಚಿಯ ಹೊನ್ನಮ್ಮ, ನಂಜನಗೂಡು ತಿರುಮಲಾಂಬ, ಎಂ.ಕೆ.ಇಂದಿರಾ, ತ್ರಿವೇಣಿ, ಅನುಪಮ ನಿರಂಜನ ಮುಂತಾದ ಅಸಂಖ್ಯಾತ ಮಹಿಳಾ ಸಾಹಿತಿಗಳು ವಿವಿಧ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ ಎಂದರು.
ಮಹಿಳಾ ಸಾಹಿತಿಗಳು ಸ್ತ್ರೀವಾದಿ ದೃಷ್ಟಿಕೋನದ ಮೂಲಕ ಮಹಿಳೆಯರ ಶೋಷಣೆ, ಸಾಮಾಜಿಕ ಸಮಸ್ಯೆಗಳು, ಆಧ್ಯಾತ್ಮಿಕತೆ, ವೈಯಕ್ತಿಕ ಅನುಭವಗಳು ಮತ್ತು ವೈಚಾರಿಕ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದ್ದಾರೆ. ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ ಜಾಗೃತಿಗೊಳಿಸುತ್ತಿರುವುದು ಶ್ಲಾಘನೀಯ ಎಂದರು.
ಪರಿಸರವಾದಿ ವೈ.ಟಿ.ಲೋಹಿತ್ ಮಾತನಾಡಿ, ಇಂದಿನ ಪರಿಸರ ಚೆನ್ನಾಗಿದ್ದಾರೆ ಮಾತ್ರ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾದ ಬೆಳವಣಿಗೆಗಳು ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ವಿಜ್ಞಾನ ಮಾನವೀಯ ಮೌಲ್ಯಗಳಿಂದ ವಿಮುಖವಾಗಬಾರದು. ಅಡಿಗೆ ಮನೆಯಲ್ಲಿ ತಯಾರಿಸುವ ಅಡುಗೆಯು ವಿಜ್ಞಾನವೇ ಆಗಿದೆ. ಕನ್ನಡದ ಮಹತ್ವದ ಸಾಹಿತಿ ಪೂರ್ಣ ಚಂದ್ರ ತೇಜಸ್ವಿ ಅವರು ಪರಿಸರ ಸಾಹಿತ್ಯಕ್ಕೆ ಮಹತ್ವದ ಕೃತಿಗಳನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಅವರ ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ಪರಿಸರದ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜ್ಞಾನಗಂಗಾ ಪ್ರೌಢಶಾಲೆಯ ಮುಖ್ಯಶಿಕ್ಷಕರುಗಳಾದ ಎನ್. ರವಿಕುಮಾರ್, ಬಿ.ಕೆ. ಜಗದೀಶ್, ಕನ್ನಡಪರ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಪ್ರೊ.ಕೆ.ಆರ್.ರವಿಕಿರಣ್, , ಎ.ಜಯರಾಮ್, ವಿ.ಎಸ್.ಹೆಗಡೆ, ವೆಂಕಟರಾಜು, ಕೋದಂಡರಾಮ್, ಸಿ.ಅಣ್ಣಯ್ಯ, ನಾಗರತ್ನಮ್ಮ, ಸೂರ್ಯನಾರಾಯಣ್, ಪರಮೇಶ್, ರಾಮಕೃಷ್ಣ, ದರ್ಗಾಜೋಗಿಹಳ್ಳಿ ಮಲ್ಲೇಶ್, ಮುನಿರತ್ನಮ್ಮ, ಸೆಲ್ವರಾಜ್ ಮುಂತಾದವರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…