ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯ-ಪ್ರಮೀಳಾ ಮಹದೇವ್

ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯವಾಗಿದೆ. ಬಾನು ಮುಸ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ಬರುವ ಮೂಲಕ ಕನ್ನಡ ಮಹಿಳಾ ಸಾಹಿತಿಗಳಿಗೆ ವಿಶ್ವ ಮನ್ನಣೆ ದೊರೆಯುವಂತಾಗಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹದೇವ್ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಜ್ಞಾನಗಂಗಾ ಪ್ರೌಢಶಾಲೆಯಲ್ಲಿ   ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಎಂದರು.

ಕನ್ನಡ ಸಾಹಿತ್ಯದಲ್ಲಿ ಮೊದಲಿನಿಂದಲೂ ಮಹಿಳಾ ಸಾಹಿತಿಗಳು ಸಾಮಾಜಿಕ‌ ಅಸಮಾನತೆಯ ವಿರುದ್ದ ಧ್ವನಿ  ಎತ್ತಿದ್ದಾರೆ. ಅಕ್ಕಮಹಾದೇವಿ, ಸಂಚಿಯ ಹೊನ್ನಮ್ಮ, ನಂಜನಗೂಡು ತಿರುಮಲಾಂಬ, ಎಂ.ಕೆ.ಇಂದಿರಾ, ತ್ರಿವೇಣಿ, ಅನುಪಮ ನಿರಂಜನ ಮುಂತಾದ ಅಸಂಖ್ಯಾತ ಮಹಿಳಾ ಸಾಹಿತಿಗಳು ವಿವಿಧ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ ಎಂದರು‌.

ಮಹಿಳಾ ಸಾಹಿತಿಗಳು ಸ್ತ್ರೀವಾದಿ ದೃಷ್ಟಿಕೋನದ ಮೂಲಕ  ಮಹಿಳೆಯರ ಶೋಷಣೆ, ಸಾಮಾಜಿಕ ಸಮಸ್ಯೆಗಳು, ಆಧ್ಯಾತ್ಮಿಕತೆ, ವೈಯಕ್ತಿಕ ಅನುಭವಗಳು ಮತ್ತು ವೈಚಾರಿಕ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದ್ದಾರೆ. ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ ಜಾಗೃತಿಗೊಳಿಸುತ್ತಿರುವುದು ಶ್ಲಾಘನೀಯ ಎಂದರು.

ಪರಿಸರವಾದಿ ವೈ.ಟಿ.ಲೋಹಿತ್ ಮಾತನಾಡಿ, ಇಂದಿನ ಪರಿಸರ ಚೆನ್ನಾಗಿದ್ದಾರೆ ಮಾತ್ರ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾದ ಬೆಳವಣಿಗೆಗಳು ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ವಿಜ್ಞಾನ ಮಾನವೀಯ ಮೌಲ್ಯಗಳಿಂದ ವಿಮುಖವಾಗಬಾರದು. ಅಡಿಗೆ ಮನೆಯಲ್ಲಿ ತಯಾರಿಸುವ ಅಡುಗೆಯು ವಿಜ್ಞಾನವೇ ಆಗಿದೆ. ಕನ್ನಡದ ಮಹತ್ವದ ಸಾಹಿತಿ ಪೂರ್ಣ ಚಂದ್ರ ತೇಜಸ್ವಿ ಅವರು ಪರಿಸರ ಸಾಹಿತ್ಯಕ್ಕೆ ಮಹತ್ವದ ಕೃತಿಗಳನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಅವರ ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ಪರಿಸರದ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ  ಜ್ಞಾನಗಂಗಾ ಪ್ರೌಢಶಾಲೆಯ ಮುಖ್ಯಶಿಕ್ಷಕರುಗಳಾದ ಎನ್. ರವಿಕುಮಾರ್, ಬಿ.ಕೆ. ಜಗದೀಶ್, ಕನ್ನಡಪರ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಪ್ರೊ.ಕೆ.ಆರ್.ರವಿಕಿರಣ್,   , ಎ.ಜಯರಾಮ್, ವಿ.ಎಸ್.ಹೆಗಡೆ, ವೆಂಕಟರಾಜು,  ಕೋದಂಡರಾಮ್, ಸಿ.ಅಣ್ಣಯ್ಯ, ನಾಗರತ್ನಮ್ಮ,   ಸೂರ್ಯನಾರಾಯಣ್, ಪರಮೇಶ್, ರಾಮಕೃಷ್ಣ,  ದರ್ಗಾಜೋಗಿಹಳ್ಳಿ ಮಲ್ಲೇಶ್, ಮುನಿರತ್ನಮ್ಮ, ಸೆಲ್ವರಾಜ್  ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

2 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

4 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

8 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

10 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

2 days ago