ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯ-ಪ್ರಮೀಳಾ ಮಹದೇವ್

ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯವಾಗಿದೆ. ಬಾನು ಮುಸ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ಬರುವ ಮೂಲಕ ಕನ್ನಡ ಮಹಿಳಾ ಸಾಹಿತಿಗಳಿಗೆ ವಿಶ್ವ ಮನ್ನಣೆ ದೊರೆಯುವಂತಾಗಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹದೇವ್ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಜ್ಞಾನಗಂಗಾ ಪ್ರೌಢಶಾಲೆಯಲ್ಲಿ   ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಎಂದರು.

ಕನ್ನಡ ಸಾಹಿತ್ಯದಲ್ಲಿ ಮೊದಲಿನಿಂದಲೂ ಮಹಿಳಾ ಸಾಹಿತಿಗಳು ಸಾಮಾಜಿಕ‌ ಅಸಮಾನತೆಯ ವಿರುದ್ದ ಧ್ವನಿ  ಎತ್ತಿದ್ದಾರೆ. ಅಕ್ಕಮಹಾದೇವಿ, ಸಂಚಿಯ ಹೊನ್ನಮ್ಮ, ನಂಜನಗೂಡು ತಿರುಮಲಾಂಬ, ಎಂ.ಕೆ.ಇಂದಿರಾ, ತ್ರಿವೇಣಿ, ಅನುಪಮ ನಿರಂಜನ ಮುಂತಾದ ಅಸಂಖ್ಯಾತ ಮಹಿಳಾ ಸಾಹಿತಿಗಳು ವಿವಿಧ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ ಎಂದರು‌.

ಮಹಿಳಾ ಸಾಹಿತಿಗಳು ಸ್ತ್ರೀವಾದಿ ದೃಷ್ಟಿಕೋನದ ಮೂಲಕ  ಮಹಿಳೆಯರ ಶೋಷಣೆ, ಸಾಮಾಜಿಕ ಸಮಸ್ಯೆಗಳು, ಆಧ್ಯಾತ್ಮಿಕತೆ, ವೈಯಕ್ತಿಕ ಅನುಭವಗಳು ಮತ್ತು ವೈಚಾರಿಕ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದ್ದಾರೆ. ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ ಜಾಗೃತಿಗೊಳಿಸುತ್ತಿರುವುದು ಶ್ಲಾಘನೀಯ ಎಂದರು.

ಪರಿಸರವಾದಿ ವೈ.ಟಿ.ಲೋಹಿತ್ ಮಾತನಾಡಿ, ಇಂದಿನ ಪರಿಸರ ಚೆನ್ನಾಗಿದ್ದಾರೆ ಮಾತ್ರ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾದ ಬೆಳವಣಿಗೆಗಳು ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ವಿಜ್ಞಾನ ಮಾನವೀಯ ಮೌಲ್ಯಗಳಿಂದ ವಿಮುಖವಾಗಬಾರದು. ಅಡಿಗೆ ಮನೆಯಲ್ಲಿ ತಯಾರಿಸುವ ಅಡುಗೆಯು ವಿಜ್ಞಾನವೇ ಆಗಿದೆ. ಕನ್ನಡದ ಮಹತ್ವದ ಸಾಹಿತಿ ಪೂರ್ಣ ಚಂದ್ರ ತೇಜಸ್ವಿ ಅವರು ಪರಿಸರ ಸಾಹಿತ್ಯಕ್ಕೆ ಮಹತ್ವದ ಕೃತಿಗಳನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಅವರ ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ಪರಿಸರದ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ  ಜ್ಞಾನಗಂಗಾ ಪ್ರೌಢಶಾಲೆಯ ಮುಖ್ಯಶಿಕ್ಷಕರುಗಳಾದ ಎನ್. ರವಿಕುಮಾರ್, ಬಿ.ಕೆ. ಜಗದೀಶ್, ಕನ್ನಡಪರ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಪ್ರೊ.ಕೆ.ಆರ್.ರವಿಕಿರಣ್,   , ಎ.ಜಯರಾಮ್, ವಿ.ಎಸ್.ಹೆಗಡೆ, ವೆಂಕಟರಾಜು,  ಕೋದಂಡರಾಮ್, ಸಿ.ಅಣ್ಣಯ್ಯ, ನಾಗರತ್ನಮ್ಮ,   ಸೂರ್ಯನಾರಾಯಣ್, ಪರಮೇಶ್, ರಾಮಕೃಷ್ಣ,  ದರ್ಗಾಜೋಗಿಹಳ್ಳಿ ಮಲ್ಲೇಶ್, ಮುನಿರತ್ನಮ್ಮ, ಸೆಲ್ವರಾಜ್  ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

19 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

20 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

1 day ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

2 days ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

2 days ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

2 days ago