ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯವಾಗಿದೆ. ಬಾನು ಮುಸ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ಬರುವ ಮೂಲಕ ಕನ್ನಡ ಮಹಿಳಾ ಸಾಹಿತಿಗಳಿಗೆ ವಿಶ್ವ ಮನ್ನಣೆ ದೊರೆಯುವಂತಾಗಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹದೇವ್ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಜ್ಞಾನಗಂಗಾ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಎಂದರು.
ಕನ್ನಡ ಸಾಹಿತ್ಯದಲ್ಲಿ ಮೊದಲಿನಿಂದಲೂ ಮಹಿಳಾ ಸಾಹಿತಿಗಳು ಸಾಮಾಜಿಕ ಅಸಮಾನತೆಯ ವಿರುದ್ದ ಧ್ವನಿ ಎತ್ತಿದ್ದಾರೆ. ಅಕ್ಕಮಹಾದೇವಿ, ಸಂಚಿಯ ಹೊನ್ನಮ್ಮ, ನಂಜನಗೂಡು ತಿರುಮಲಾಂಬ, ಎಂ.ಕೆ.ಇಂದಿರಾ, ತ್ರಿವೇಣಿ, ಅನುಪಮ ನಿರಂಜನ ಮುಂತಾದ ಅಸಂಖ್ಯಾತ ಮಹಿಳಾ ಸಾಹಿತಿಗಳು ವಿವಿಧ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ ಎಂದರು.
ಮಹಿಳಾ ಸಾಹಿತಿಗಳು ಸ್ತ್ರೀವಾದಿ ದೃಷ್ಟಿಕೋನದ ಮೂಲಕ ಮಹಿಳೆಯರ ಶೋಷಣೆ, ಸಾಮಾಜಿಕ ಸಮಸ್ಯೆಗಳು, ಆಧ್ಯಾತ್ಮಿಕತೆ, ವೈಯಕ್ತಿಕ ಅನುಭವಗಳು ಮತ್ತು ವೈಚಾರಿಕ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದ್ದಾರೆ. ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ ಜಾಗೃತಿಗೊಳಿಸುತ್ತಿರುವುದು ಶ್ಲಾಘನೀಯ ಎಂದರು.
ಪರಿಸರವಾದಿ ವೈ.ಟಿ.ಲೋಹಿತ್ ಮಾತನಾಡಿ, ಇಂದಿನ ಪರಿಸರ ಚೆನ್ನಾಗಿದ್ದಾರೆ ಮಾತ್ರ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾದ ಬೆಳವಣಿಗೆಗಳು ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ವಿಜ್ಞಾನ ಮಾನವೀಯ ಮೌಲ್ಯಗಳಿಂದ ವಿಮುಖವಾಗಬಾರದು. ಅಡಿಗೆ ಮನೆಯಲ್ಲಿ ತಯಾರಿಸುವ ಅಡುಗೆಯು ವಿಜ್ಞಾನವೇ ಆಗಿದೆ. ಕನ್ನಡದ ಮಹತ್ವದ ಸಾಹಿತಿ ಪೂರ್ಣ ಚಂದ್ರ ತೇಜಸ್ವಿ ಅವರು ಪರಿಸರ ಸಾಹಿತ್ಯಕ್ಕೆ ಮಹತ್ವದ ಕೃತಿಗಳನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಅವರ ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ಪರಿಸರದ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜ್ಞಾನಗಂಗಾ ಪ್ರೌಢಶಾಲೆಯ ಮುಖ್ಯಶಿಕ್ಷಕರುಗಳಾದ ಎನ್. ರವಿಕುಮಾರ್, ಬಿ.ಕೆ. ಜಗದೀಶ್, ಕನ್ನಡಪರ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಪ್ರೊ.ಕೆ.ಆರ್.ರವಿಕಿರಣ್, , ಎ.ಜಯರಾಮ್, ವಿ.ಎಸ್.ಹೆಗಡೆ, ವೆಂಕಟರಾಜು, ಕೋದಂಡರಾಮ್, ಸಿ.ಅಣ್ಣಯ್ಯ, ನಾಗರತ್ನಮ್ಮ, ಸೂರ್ಯನಾರಾಯಣ್, ಪರಮೇಶ್, ರಾಮಕೃಷ್ಣ, ದರ್ಗಾಜೋಗಿಹಳ್ಳಿ ಮಲ್ಲೇಶ್, ಮುನಿರತ್ನಮ್ಮ, ಸೆಲ್ವರಾಜ್ ಮುಂತಾದವರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…