ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕಥಾ ಸಂಕಲನವು ಬೂಕರ್ ಪ್ರಶಸ್ತಿ ಪಡೆದಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ಮೊದಲ ಬಾರಿಗೆ ಈ ಗೌರವ ಸಂದಿದೆ. ದೀಪಾ ಭಾಸ್ತಿ ಅವರು ಈ ಕೃತಿಯನ್ನು ಇಂಗ್ಲಿಷ್ಗೆ ಅನುವಾದಿಸಿದ್ದು, ಇದು ಕನ್ನಡಕ್ಕೆ ಸಂದ ಗೌರವ ಎಂದು ಗಣ್ಯರು ಕೊಂಡಾಡಿದ್ದಾರೆ.
ಕನ್ನಡ ಕಸ್ತೂರಿ ಕಂಪು ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸುವಂತೆ ಕನ್ನಡದ ಸಾಹಿತಿ ಬಾನು ಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಾಸ್ತಿ ಮಾಡಿ, ಲಂಡನ್ ನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಇದೀಗ ಬೆಂಗಳೂರಿಗೆ ಬಂದಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ಸಂಭ್ರಮವನ್ನು ಲಂಡನ್ ನಲ್ಲಿ ಮುಗಿಸಿಕೊಂಡು ಕನ್ನಡನಾಡಿನಲ್ಲೂ ಸಂಭ್ರಮವನ್ನು ಆಚರಿಸಲು ಇಂದು ಬೆಂಗಳೂರಿಗೆ ಬಂದಿದ್ದೇನೆ. ಲಂಡನ್ ನಲ್ಲಿ ಕನ್ನಡ ವಿರಾಜಮಾನವಾಯ್ತು, ಜಾಗತಿಕ ಮಟ್ಟದಲ್ಲಿ ಕನ್ನಡವನ್ನು ಪ್ರತಿನಿಧಿಸಿದೆವು. ಇದು ನಮಗೆ ವಿಶಿಷ್ಟ ಅನುಭವಾಯಿತು ಎಂದರು
ಕನ್ನಡಿಗರ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಸದಾ ಋಣಿಯಾಗಿರುತ್ತೇನೆ. ನೀವು ತೋರಿಸಿದ ಪ್ರೀತಿ, ಅಭಿಮಾನವು ನನಗೆ ಶಕ್ತಿಯಾಯಿತು. ಕನ್ನಡ ಸಾಹಿತ್ಯ ತಾಯಿ ಬೇರು. ನಾನು ಅದರ ಒಂದು ಟೊಂಗೆ ಅಷ್ಟೆ ಎಂದು ಹೇಳಿದರು.
ಈ ವೇಳೆ ಡೊಳ್ಳು ಹಾಗೂ ಯಕ್ಷಗಾನ ತಂಡಗಳು ಅವರ ಸ್ವಾಗತಕ್ಕೆ ಸಾಕ್ಷಿಯಾದವು.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…