ಕನ್ನಡ ಸಾಹಿತ್ಯ ತಾಯಿ ಬೇರು- ನಾನು ಅದರ ಒಂದು ಟೊಂಗೆ- ಬೂಕರ್ ಪ್ರಶಸ್ತಿ ವಿಜೇತೆ‌ ಬಾನು ಮುಷ್ತಾಕ್

ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕಥಾ ಸಂಕಲನವು ಬೂಕರ್ ಪ್ರಶಸ್ತಿ ಪಡೆದಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ಮೊದಲ ಬಾರಿಗೆ ಈ ಗೌರವ ಸಂದಿದೆ. ದೀಪಾ ಭಾಸ್ತಿ ಅವರು ಈ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದು, ಇದು ಕನ್ನಡಕ್ಕೆ ಸಂದ ಗೌರವ ಎಂದು ಗಣ್ಯರು ಕೊಂಡಾಡಿದ್ದಾರೆ.

ಕನ್ನಡ ಕಸ್ತೂರಿ ಕಂಪು ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸುವಂತೆ ಕನ್ನಡದ ಸಾಹಿತಿ ಬಾನು ಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಾಸ್ತಿ ಮಾಡಿ, ಲಂಡನ್ ನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಇದೀಗ ಬೆಂಗಳೂರಿಗೆ ಬಂದಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ಸಂಭ್ರಮವನ್ನು ಲಂಡನ್ ನಲ್ಲಿ ಮುಗಿಸಿಕೊಂಡು ಕನ್ನಡನಾಡಿನಲ್ಲೂ ಸಂಭ್ರಮವನ್ನು ಆಚರಿಸಲು ಇಂದು ಬೆಂಗಳೂರಿಗೆ ಬಂದಿದ್ದೇನೆ. ಲಂಡನ್ ನಲ್ಲಿ ಕನ್ನಡ ವಿರಾಜಮಾನವಾಯ್ತು, ಜಾಗತಿಕ ಮಟ್ಟದಲ್ಲಿ ಕನ್ನಡವನ್ನು ಪ್ರತಿನಿಧಿಸಿದೆವು. ಇದು ನಮಗೆ ವಿಶಿಷ್ಟ ಅನುಭವಾಯಿತು ಎಂದರು‌

ಕನ್ನಡಿಗರ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಸದಾ ಋಣಿಯಾಗಿರುತ್ತೇನೆ. ನೀವು ತೋರಿಸಿದ ಪ್ರೀತಿ, ಅಭಿಮಾನವು ನನಗೆ ಶಕ್ತಿಯಾಯಿತು. ಕನ್ನಡ ಸಾಹಿತ್ಯ ತಾಯಿ ಬೇರು. ನಾನು ಅದರ ಒಂದು ಟೊಂಗೆ ಅಷ್ಟೆ ಎಂದು ಹೇಳಿದರು.

ಸಾಧನೆಗೈದ ಕನ್ನಡತಿಯರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ವೆಂಕಟೇಶ್ ಎಂ ವಿ ಹಾಗೂ ಇಲಾಖೆಯ ನಿರ್ದೇಶಕರಾದ ಕೆ ಎಂ ಗಾಯತ್ರಿ ಸೇರಿದಂತೆ ಇತರರು ಏರ್ಪೋರ್ಟ್ ನಲ್ಲಿ ಭವ್ಯವಾಗಿ ಸ್ವಾಗತ‌ಕೋರಿದರು.

ಈ ವೇಳೆ ಡೊಳ್ಳು ಹಾಗೂ ಯಕ್ಷಗಾನ ತಂಡಗಳು ಅವರ ಸ್ವಾಗತಕ್ಕೆ ಸಾಕ್ಷಿಯಾದವು.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

2 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

3 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

3 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

4 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

16 hours ago