ಕನ್ನಡ ಸಾಹಿತ್ಯ ತಾಯಿ ಬೇರು- ನಾನು ಅದರ ಒಂದು ಟೊಂಗೆ- ಬೂಕರ್ ಪ್ರಶಸ್ತಿ ವಿಜೇತೆ‌ ಬಾನು ಮುಷ್ತಾಕ್

ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕಥಾ ಸಂಕಲನವು ಬೂಕರ್ ಪ್ರಶಸ್ತಿ ಪಡೆದಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ಮೊದಲ ಬಾರಿಗೆ ಈ ಗೌರವ ಸಂದಿದೆ. ದೀಪಾ ಭಾಸ್ತಿ ಅವರು ಈ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದು, ಇದು ಕನ್ನಡಕ್ಕೆ ಸಂದ ಗೌರವ ಎಂದು ಗಣ್ಯರು ಕೊಂಡಾಡಿದ್ದಾರೆ.

ಕನ್ನಡ ಕಸ್ತೂರಿ ಕಂಪು ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸುವಂತೆ ಕನ್ನಡದ ಸಾಹಿತಿ ಬಾನು ಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಾಸ್ತಿ ಮಾಡಿ, ಲಂಡನ್ ನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಇದೀಗ ಬೆಂಗಳೂರಿಗೆ ಬಂದಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ಸಂಭ್ರಮವನ್ನು ಲಂಡನ್ ನಲ್ಲಿ ಮುಗಿಸಿಕೊಂಡು ಕನ್ನಡನಾಡಿನಲ್ಲೂ ಸಂಭ್ರಮವನ್ನು ಆಚರಿಸಲು ಇಂದು ಬೆಂಗಳೂರಿಗೆ ಬಂದಿದ್ದೇನೆ. ಲಂಡನ್ ನಲ್ಲಿ ಕನ್ನಡ ವಿರಾಜಮಾನವಾಯ್ತು, ಜಾಗತಿಕ ಮಟ್ಟದಲ್ಲಿ ಕನ್ನಡವನ್ನು ಪ್ರತಿನಿಧಿಸಿದೆವು. ಇದು ನಮಗೆ ವಿಶಿಷ್ಟ ಅನುಭವಾಯಿತು ಎಂದರು‌

ಕನ್ನಡಿಗರ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಸದಾ ಋಣಿಯಾಗಿರುತ್ತೇನೆ. ನೀವು ತೋರಿಸಿದ ಪ್ರೀತಿ, ಅಭಿಮಾನವು ನನಗೆ ಶಕ್ತಿಯಾಯಿತು. ಕನ್ನಡ ಸಾಹಿತ್ಯ ತಾಯಿ ಬೇರು. ನಾನು ಅದರ ಒಂದು ಟೊಂಗೆ ಅಷ್ಟೆ ಎಂದು ಹೇಳಿದರು.

ಸಾಧನೆಗೈದ ಕನ್ನಡತಿಯರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ವೆಂಕಟೇಶ್ ಎಂ ವಿ ಹಾಗೂ ಇಲಾಖೆಯ ನಿರ್ದೇಶಕರಾದ ಕೆ ಎಂ ಗಾಯತ್ರಿ ಸೇರಿದಂತೆ ಇತರರು ಏರ್ಪೋರ್ಟ್ ನಲ್ಲಿ ಭವ್ಯವಾಗಿ ಸ್ವಾಗತ‌ಕೋರಿದರು.

ಈ ವೇಳೆ ಡೊಳ್ಳು ಹಾಗೂ ಯಕ್ಷಗಾನ ತಂಡಗಳು ಅವರ ಸ್ವಾಗತಕ್ಕೆ ಸಾಕ್ಷಿಯಾದವು.

Ramesh Babu

Journalist

Recent Posts

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 minute ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago