ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕಥಾ ಸಂಕಲನವು ಬೂಕರ್ ಪ್ರಶಸ್ತಿ ಪಡೆದಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ಮೊದಲ ಬಾರಿಗೆ ಈ ಗೌರವ ಸಂದಿದೆ. ದೀಪಾ ಭಾಸ್ತಿ ಅವರು ಈ ಕೃತಿಯನ್ನು ಇಂಗ್ಲಿಷ್ಗೆ ಅನುವಾದಿಸಿದ್ದು, ಇದು ಕನ್ನಡಕ್ಕೆ ಸಂದ ಗೌರವ ಎಂದು ಗಣ್ಯರು ಕೊಂಡಾಡಿದ್ದಾರೆ.
ಕನ್ನಡ ಕಸ್ತೂರಿ ಕಂಪು ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸುವಂತೆ ಕನ್ನಡದ ಸಾಹಿತಿ ಬಾನು ಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಾಸ್ತಿ ಮಾಡಿ, ಲಂಡನ್ ನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಇದೀಗ ಬೆಂಗಳೂರಿಗೆ ಬಂದಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ಸಂಭ್ರಮವನ್ನು ಲಂಡನ್ ನಲ್ಲಿ ಮುಗಿಸಿಕೊಂಡು ಕನ್ನಡನಾಡಿನಲ್ಲೂ ಸಂಭ್ರಮವನ್ನು ಆಚರಿಸಲು ಇಂದು ಬೆಂಗಳೂರಿಗೆ ಬಂದಿದ್ದೇನೆ. ಲಂಡನ್ ನಲ್ಲಿ ಕನ್ನಡ ವಿರಾಜಮಾನವಾಯ್ತು, ಜಾಗತಿಕ ಮಟ್ಟದಲ್ಲಿ ಕನ್ನಡವನ್ನು ಪ್ರತಿನಿಧಿಸಿದೆವು. ಇದು ನಮಗೆ ವಿಶಿಷ್ಟ ಅನುಭವಾಯಿತು ಎಂದರು
ಕನ್ನಡಿಗರ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಸದಾ ಋಣಿಯಾಗಿರುತ್ತೇನೆ. ನೀವು ತೋರಿಸಿದ ಪ್ರೀತಿ, ಅಭಿಮಾನವು ನನಗೆ ಶಕ್ತಿಯಾಯಿತು. ಕನ್ನಡ ಸಾಹಿತ್ಯ ತಾಯಿ ಬೇರು. ನಾನು ಅದರ ಒಂದು ಟೊಂಗೆ ಅಷ್ಟೆ ಎಂದು ಹೇಳಿದರು.
ಈ ವೇಳೆ ಡೊಳ್ಳು ಹಾಗೂ ಯಕ್ಷಗಾನ ತಂಡಗಳು ಅವರ ಸ್ವಾಗತಕ್ಕೆ ಸಾಕ್ಷಿಯಾದವು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…