ಕನ್ನಡ ಸಾಹಿತ್ಯ ತಾಯಿ ಬೇರು- ನಾನು ಅದರ ಒಂದು ಟೊಂಗೆ- ಬೂಕರ್ ಪ್ರಶಸ್ತಿ ವಿಜೇತೆ‌ ಬಾನು ಮುಷ್ತಾಕ್

ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕಥಾ ಸಂಕಲನವು ಬೂಕರ್ ಪ್ರಶಸ್ತಿ ಪಡೆದಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ಮೊದಲ ಬಾರಿಗೆ ಈ ಗೌರವ ಸಂದಿದೆ. ದೀಪಾ ಭಾಸ್ತಿ ಅವರು ಈ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದು, ಇದು ಕನ್ನಡಕ್ಕೆ ಸಂದ ಗೌರವ ಎಂದು ಗಣ್ಯರು ಕೊಂಡಾಡಿದ್ದಾರೆ.

ಕನ್ನಡ ಕಸ್ತೂರಿ ಕಂಪು ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸುವಂತೆ ಕನ್ನಡದ ಸಾಹಿತಿ ಬಾನು ಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಾಸ್ತಿ ಮಾಡಿ, ಲಂಡನ್ ನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಇದೀಗ ಬೆಂಗಳೂರಿಗೆ ಬಂದಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ಸಂಭ್ರಮವನ್ನು ಲಂಡನ್ ನಲ್ಲಿ ಮುಗಿಸಿಕೊಂಡು ಕನ್ನಡನಾಡಿನಲ್ಲೂ ಸಂಭ್ರಮವನ್ನು ಆಚರಿಸಲು ಇಂದು ಬೆಂಗಳೂರಿಗೆ ಬಂದಿದ್ದೇನೆ. ಲಂಡನ್ ನಲ್ಲಿ ಕನ್ನಡ ವಿರಾಜಮಾನವಾಯ್ತು, ಜಾಗತಿಕ ಮಟ್ಟದಲ್ಲಿ ಕನ್ನಡವನ್ನು ಪ್ರತಿನಿಧಿಸಿದೆವು. ಇದು ನಮಗೆ ವಿಶಿಷ್ಟ ಅನುಭವಾಯಿತು ಎಂದರು‌

ಕನ್ನಡಿಗರ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಸದಾ ಋಣಿಯಾಗಿರುತ್ತೇನೆ. ನೀವು ತೋರಿಸಿದ ಪ್ರೀತಿ, ಅಭಿಮಾನವು ನನಗೆ ಶಕ್ತಿಯಾಯಿತು. ಕನ್ನಡ ಸಾಹಿತ್ಯ ತಾಯಿ ಬೇರು. ನಾನು ಅದರ ಒಂದು ಟೊಂಗೆ ಅಷ್ಟೆ ಎಂದು ಹೇಳಿದರು.

ಸಾಧನೆಗೈದ ಕನ್ನಡತಿಯರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ವೆಂಕಟೇಶ್ ಎಂ ವಿ ಹಾಗೂ ಇಲಾಖೆಯ ನಿರ್ದೇಶಕರಾದ ಕೆ ಎಂ ಗಾಯತ್ರಿ ಸೇರಿದಂತೆ ಇತರರು ಏರ್ಪೋರ್ಟ್ ನಲ್ಲಿ ಭವ್ಯವಾಗಿ ಸ್ವಾಗತ‌ಕೋರಿದರು.

ಈ ವೇಳೆ ಡೊಳ್ಳು ಹಾಗೂ ಯಕ್ಷಗಾನ ತಂಡಗಳು ಅವರ ಸ್ವಾಗತಕ್ಕೆ ಸಾಕ್ಷಿಯಾದವು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

2 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

3 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

16 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

16 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

16 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

17 hours ago