Categories: Home

ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಕೊಡುಗೆ ಅನನ್ಯ-ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು

ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಕೊಡುಗೆ ಅನನ್ಯವಾಗಿದೆ. ಸ್ತ್ರೀ ಸಂವೇದನೆಗೆ ಸಂಬಂಧಿಸಿದ ಸಂಶೋಧನೆ, ಜೈನ ಸಾಹಿತ್ಯ ಅವರ ವಿಶೇಷ ಅಧ್ಯಯನ ಕ್ಷೇತ್ರವಾಗಿತ್ತು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ನಡೆದ ನಾಡೋಜ ಕಮಲಾ ಹಂಪನಾ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಹಳೆಗನ್ನಡ ಸಾಹಿತ್ಯದ ಸಮಗ್ರ ಅಧ್ಯಯನದಿಂದಾಗಿ  ಮಹತ್ವದ ಕನ್ನಡ ಕಾವ್ಯಗಳನ್ನು ಸಂಗ್ರಹಿಸಿ ಕೊಟ್ಟರು. ಸ್ತ್ರೀವಾದಿ ನೆಲೆಯಲ್ಲಿ ವಿಮರ್ಶೆಯೊಂದಿಗೆ,  ಮಹಿಳೆಯರನ್ನು ಕುರಿತ ವೈಚಾರಿಕ ಬರಹಗಳೊಂದಿಗೆ ಕನ್ನಡ ಮಹಿಳಾ ಸಾಹಿತ್ಯವನ್ನು ವಿಸ್ತರಿಸಿದರು. ಕಮಲಾಹಂಪನಾ ಅವರ ಕನ್ನಡ ಸಾಹಿತ್ಯ ಸಂಶೋಧನೆ ಮತ್ತು ಚಿಂತನೆಗಳಿಗೆ ಅವರಿಗೆ ಕಲಿಸಿದ ದೊಡ್ಡ ಗುರುಪರಂಪರೆ ಪ್ರೇರಣೆ ಮತ್ತು ಸ್ಫೂರ್ತಿಯಾಗಿತ್ತು ಎಂದರು.

ವಿಶ್ವವಿದ್ಯಾಲಯ ಅಧ್ಯಯನ ಪೀಠಗಳ ಅಧ್ಯಕ್ಷರು ಮತ್ತು ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಕಮಲಾಪ್ರಿಯ ಕಾವ್ಯನಾಮದ ಮೂಲಕ ಹಲವು ಸೃಜನಶೀಲ ಕೃತಿಗಳನ್ನು ಬರೆದ ಕಮಲಾಹಂಪನಾ, ಕನ್ನಡ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃತಿಗಳನ್ನು‌ ರಚನೆ ಮಾಡಿದರು.  ಕಥಾಸಂಕಲನಗಳು, ವಚನ ಸಂಕಲನಗಳು, ವಿಮರ್ಶಾ ಕೃತಿಗಳು, ಸಂಶೋಧನಾ ಗ್ರಂಥಗಳು, ಅನುವಾದಗಳು, ನಾಟಕ ರೂಪಕಗಳು, ಕಾದಂಬರಿ ರಚಿಸಿದರು. ‌ಕಮಲಾ ಹಂಪನಾ ಅವರ ಸಾಧನೆಯನ್ನು ಗುರುತಿಸಿ ಹಲವು ಪ್ರಶಸ್ತಿಗಳು ಮತ್ತು ಗೌರವಗಳು ಸಂದಿವೆ. ಮೂಡುಬಿದಿರೆಯಲ್ಲಿ ನಡೆದ 71ನೇ ಅಖಿಲ‌ ಭಾರತ ‌ಕನ್ನಡ ಸಾಹಿತ್ಯ ಸಮ್ಮೇಳನದ ‌ಅಧ್ಯಕ್ಷರಾಗಿದ್ದರು ಎಂದರು.

ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿ, ಜೈನಧರ್ಮವು ಪ್ರತಿಪಾದಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಜೈನ ಧರ್ಮದಲ್ಲಿ ಸತ್ಯ, ನೀತಿ, ಉತ್ತಮ ನಡವಳಿಕೆಗಳಿಗೆ ಹೆಚ್ಚಿನ ಪ್ರಧಾನ್ಯತೆ ಇದೆ. ಕಮಲಾಹಂಪನಾ ಅವರು ಜೈನ ಧರ್ಮ ಮತ್ತು  ಸಾಹಿತ್ಯವನ್ನು ಗಂಭೀರವಾಗಿ ಅಧ್ಯಯನ ಮಾಡಿದವರು.‌  ಕಮಲಾ ಹಂಪನಾ ಅವರ ಕನ್ನಡ ಸಾಹಿತ್ಯದ   ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು  ಕನ್ನಡಿಗರು ಗೌರವಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡಪರ ಹಿರಿಯ ಹೋರಾಟಗಾರರುಗಳಾದ ಸಂಜೀವನಾಯಕ್, ಗುರುರಾಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಕನ್ನಡ ಜಾಗೃತ ಪರಿಷತ್ತು ಗೌರವ ಅಧ್ಯಕ್ಷೆ ಸುಲೋಚನಮ್ಮ ವೆಂಕಟರೆಡ್ಡಿ, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್, ಕಾರ್ಯದರ್ಶಿ ಎಚ್.ಮುನಿಪಾಪಣ್ಣ, ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕವಿ ಶ್ರೀನಿವಾಸ ವಾಣಿಗಾರಹಳ್ಳಿ, ಕನ್ನಡ ಜಾಗೃತ ಪರಿಷತ್ತು ಮತ್ತು  ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

5 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

6 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

19 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

20 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

22 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

22 hours ago