Categories: Home

ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಕೊಡುಗೆ ಅನನ್ಯ-ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು

ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಕೊಡುಗೆ ಅನನ್ಯವಾಗಿದೆ. ಸ್ತ್ರೀ ಸಂವೇದನೆಗೆ ಸಂಬಂಧಿಸಿದ ಸಂಶೋಧನೆ, ಜೈನ ಸಾಹಿತ್ಯ ಅವರ ವಿಶೇಷ ಅಧ್ಯಯನ ಕ್ಷೇತ್ರವಾಗಿತ್ತು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ನಡೆದ ನಾಡೋಜ ಕಮಲಾ ಹಂಪನಾ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಹಳೆಗನ್ನಡ ಸಾಹಿತ್ಯದ ಸಮಗ್ರ ಅಧ್ಯಯನದಿಂದಾಗಿ  ಮಹತ್ವದ ಕನ್ನಡ ಕಾವ್ಯಗಳನ್ನು ಸಂಗ್ರಹಿಸಿ ಕೊಟ್ಟರು. ಸ್ತ್ರೀವಾದಿ ನೆಲೆಯಲ್ಲಿ ವಿಮರ್ಶೆಯೊಂದಿಗೆ,  ಮಹಿಳೆಯರನ್ನು ಕುರಿತ ವೈಚಾರಿಕ ಬರಹಗಳೊಂದಿಗೆ ಕನ್ನಡ ಮಹಿಳಾ ಸಾಹಿತ್ಯವನ್ನು ವಿಸ್ತರಿಸಿದರು. ಕಮಲಾಹಂಪನಾ ಅವರ ಕನ್ನಡ ಸಾಹಿತ್ಯ ಸಂಶೋಧನೆ ಮತ್ತು ಚಿಂತನೆಗಳಿಗೆ ಅವರಿಗೆ ಕಲಿಸಿದ ದೊಡ್ಡ ಗುರುಪರಂಪರೆ ಪ್ರೇರಣೆ ಮತ್ತು ಸ್ಫೂರ್ತಿಯಾಗಿತ್ತು ಎಂದರು.

ವಿಶ್ವವಿದ್ಯಾಲಯ ಅಧ್ಯಯನ ಪೀಠಗಳ ಅಧ್ಯಕ್ಷರು ಮತ್ತು ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಕಮಲಾಪ್ರಿಯ ಕಾವ್ಯನಾಮದ ಮೂಲಕ ಹಲವು ಸೃಜನಶೀಲ ಕೃತಿಗಳನ್ನು ಬರೆದ ಕಮಲಾಹಂಪನಾ, ಕನ್ನಡ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃತಿಗಳನ್ನು‌ ರಚನೆ ಮಾಡಿದರು.  ಕಥಾಸಂಕಲನಗಳು, ವಚನ ಸಂಕಲನಗಳು, ವಿಮರ್ಶಾ ಕೃತಿಗಳು, ಸಂಶೋಧನಾ ಗ್ರಂಥಗಳು, ಅನುವಾದಗಳು, ನಾಟಕ ರೂಪಕಗಳು, ಕಾದಂಬರಿ ರಚಿಸಿದರು. ‌ಕಮಲಾ ಹಂಪನಾ ಅವರ ಸಾಧನೆಯನ್ನು ಗುರುತಿಸಿ ಹಲವು ಪ್ರಶಸ್ತಿಗಳು ಮತ್ತು ಗೌರವಗಳು ಸಂದಿವೆ. ಮೂಡುಬಿದಿರೆಯಲ್ಲಿ ನಡೆದ 71ನೇ ಅಖಿಲ‌ ಭಾರತ ‌ಕನ್ನಡ ಸಾಹಿತ್ಯ ಸಮ್ಮೇಳನದ ‌ಅಧ್ಯಕ್ಷರಾಗಿದ್ದರು ಎಂದರು.

ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿ, ಜೈನಧರ್ಮವು ಪ್ರತಿಪಾದಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಜೈನ ಧರ್ಮದಲ್ಲಿ ಸತ್ಯ, ನೀತಿ, ಉತ್ತಮ ನಡವಳಿಕೆಗಳಿಗೆ ಹೆಚ್ಚಿನ ಪ್ರಧಾನ್ಯತೆ ಇದೆ. ಕಮಲಾಹಂಪನಾ ಅವರು ಜೈನ ಧರ್ಮ ಮತ್ತು  ಸಾಹಿತ್ಯವನ್ನು ಗಂಭೀರವಾಗಿ ಅಧ್ಯಯನ ಮಾಡಿದವರು.‌  ಕಮಲಾ ಹಂಪನಾ ಅವರ ಕನ್ನಡ ಸಾಹಿತ್ಯದ   ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು  ಕನ್ನಡಿಗರು ಗೌರವಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡಪರ ಹಿರಿಯ ಹೋರಾಟಗಾರರುಗಳಾದ ಸಂಜೀವನಾಯಕ್, ಗುರುರಾಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಕನ್ನಡ ಜಾಗೃತ ಪರಿಷತ್ತು ಗೌರವ ಅಧ್ಯಕ್ಷೆ ಸುಲೋಚನಮ್ಮ ವೆಂಕಟರೆಡ್ಡಿ, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್, ಕಾರ್ಯದರ್ಶಿ ಎಚ್.ಮುನಿಪಾಪಣ್ಣ, ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕವಿ ಶ್ರೀನಿವಾಸ ವಾಣಿಗಾರಹಳ್ಳಿ, ಕನ್ನಡ ಜಾಗೃತ ಪರಿಷತ್ತು ಮತ್ತು  ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago