Categories: Home

ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಕೊಡುಗೆ ಅನನ್ಯ-ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು

ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಕೊಡುಗೆ ಅನನ್ಯವಾಗಿದೆ. ಸ್ತ್ರೀ ಸಂವೇದನೆಗೆ ಸಂಬಂಧಿಸಿದ ಸಂಶೋಧನೆ, ಜೈನ ಸಾಹಿತ್ಯ ಅವರ ವಿಶೇಷ ಅಧ್ಯಯನ ಕ್ಷೇತ್ರವಾಗಿತ್ತು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ನಡೆದ ನಾಡೋಜ ಕಮಲಾ ಹಂಪನಾ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಹಳೆಗನ್ನಡ ಸಾಹಿತ್ಯದ ಸಮಗ್ರ ಅಧ್ಯಯನದಿಂದಾಗಿ  ಮಹತ್ವದ ಕನ್ನಡ ಕಾವ್ಯಗಳನ್ನು ಸಂಗ್ರಹಿಸಿ ಕೊಟ್ಟರು. ಸ್ತ್ರೀವಾದಿ ನೆಲೆಯಲ್ಲಿ ವಿಮರ್ಶೆಯೊಂದಿಗೆ,  ಮಹಿಳೆಯರನ್ನು ಕುರಿತ ವೈಚಾರಿಕ ಬರಹಗಳೊಂದಿಗೆ ಕನ್ನಡ ಮಹಿಳಾ ಸಾಹಿತ್ಯವನ್ನು ವಿಸ್ತರಿಸಿದರು. ಕಮಲಾಹಂಪನಾ ಅವರ ಕನ್ನಡ ಸಾಹಿತ್ಯ ಸಂಶೋಧನೆ ಮತ್ತು ಚಿಂತನೆಗಳಿಗೆ ಅವರಿಗೆ ಕಲಿಸಿದ ದೊಡ್ಡ ಗುರುಪರಂಪರೆ ಪ್ರೇರಣೆ ಮತ್ತು ಸ್ಫೂರ್ತಿಯಾಗಿತ್ತು ಎಂದರು.

ವಿಶ್ವವಿದ್ಯಾಲಯ ಅಧ್ಯಯನ ಪೀಠಗಳ ಅಧ್ಯಕ್ಷರು ಮತ್ತು ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಕಮಲಾಪ್ರಿಯ ಕಾವ್ಯನಾಮದ ಮೂಲಕ ಹಲವು ಸೃಜನಶೀಲ ಕೃತಿಗಳನ್ನು ಬರೆದ ಕಮಲಾಹಂಪನಾ, ಕನ್ನಡ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃತಿಗಳನ್ನು‌ ರಚನೆ ಮಾಡಿದರು.  ಕಥಾಸಂಕಲನಗಳು, ವಚನ ಸಂಕಲನಗಳು, ವಿಮರ್ಶಾ ಕೃತಿಗಳು, ಸಂಶೋಧನಾ ಗ್ರಂಥಗಳು, ಅನುವಾದಗಳು, ನಾಟಕ ರೂಪಕಗಳು, ಕಾದಂಬರಿ ರಚಿಸಿದರು. ‌ಕಮಲಾ ಹಂಪನಾ ಅವರ ಸಾಧನೆಯನ್ನು ಗುರುತಿಸಿ ಹಲವು ಪ್ರಶಸ್ತಿಗಳು ಮತ್ತು ಗೌರವಗಳು ಸಂದಿವೆ. ಮೂಡುಬಿದಿರೆಯಲ್ಲಿ ನಡೆದ 71ನೇ ಅಖಿಲ‌ ಭಾರತ ‌ಕನ್ನಡ ಸಾಹಿತ್ಯ ಸಮ್ಮೇಳನದ ‌ಅಧ್ಯಕ್ಷರಾಗಿದ್ದರು ಎಂದರು.

ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿ, ಜೈನಧರ್ಮವು ಪ್ರತಿಪಾದಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಜೈನ ಧರ್ಮದಲ್ಲಿ ಸತ್ಯ, ನೀತಿ, ಉತ್ತಮ ನಡವಳಿಕೆಗಳಿಗೆ ಹೆಚ್ಚಿನ ಪ್ರಧಾನ್ಯತೆ ಇದೆ. ಕಮಲಾಹಂಪನಾ ಅವರು ಜೈನ ಧರ್ಮ ಮತ್ತು  ಸಾಹಿತ್ಯವನ್ನು ಗಂಭೀರವಾಗಿ ಅಧ್ಯಯನ ಮಾಡಿದವರು.‌  ಕಮಲಾ ಹಂಪನಾ ಅವರ ಕನ್ನಡ ಸಾಹಿತ್ಯದ   ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು  ಕನ್ನಡಿಗರು ಗೌರವಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡಪರ ಹಿರಿಯ ಹೋರಾಟಗಾರರುಗಳಾದ ಸಂಜೀವನಾಯಕ್, ಗುರುರಾಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಕನ್ನಡ ಜಾಗೃತ ಪರಿಷತ್ತು ಗೌರವ ಅಧ್ಯಕ್ಷೆ ಸುಲೋಚನಮ್ಮ ವೆಂಕಟರೆಡ್ಡಿ, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್, ಕಾರ್ಯದರ್ಶಿ ಎಚ್.ಮುನಿಪಾಪಣ್ಣ, ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕವಿ ಶ್ರೀನಿವಾಸ ವಾಣಿಗಾರಹಳ್ಳಿ, ಕನ್ನಡ ಜಾಗೃತ ಪರಿಷತ್ತು ಮತ್ತು  ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

18 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago