ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಕನಕದಾಸರ ಕೊಡುಗೆ ಅಪಾರ- ಉಪನ್ಯಾಸಕ ಗಿರೀಶ್ ಎನ್.ಬರಗೂರು

ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ಕವಿ‌ ಹಾಗೂ ದಾರ್ಶನಿಕರಾಗಿ ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗಿರೀಶ್ ಎನ್.ಬರಗೂರು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ದಾಸಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ, ಕನಕದಾಸರ ಬದುಕು ಮತ್ತು ಸಾಹಿತ್ಯ ಕುರಿತು ಮಾತನಾಡಿದ ಅವರು, ಕನಕದಾಸರು  ಹರಿಭಕ್ತಸಾರ, ಮೋಹನತರಂಗಿಣಿ,  ನಳಚರಿತೆ,  ರಾಮಧಾನ್ಯ ಚರಿತೆ ಕಾವ್ಯಗಳ ಜೊತೆಗೆ ಸುಮಾರು 300ಕ್ಕೂ ಹೆಚ್ಚು ಕೀರ್ತನೆಗಳನ್ನು ರಚಿಸುವ ಮೂಲಕ  ಕನ್ನಡ ಸಾಹಿತ್ಯವನ್ನು ಸಮೃದ್ದಿಗೊಳಿಸಿದರು ಎಂದರು.

ಕನಕದಾಸರ ಕೀರ್ತನೆಗಳ ವೈಶಿಷ್ಟ್ಯವೆಂದರೆ ಸರಳ ಭಾಷೆಯಲ್ಲಿ ವಿಷಯವನ್ನು ಮನಮುಟ್ಟುವಂತೆ ತಿಳಿಸುತ್ತವೆ.  ಕನಕದಾಸರ ಕನ್ನಡ ಭಾಷೆಯ ಚಿಂತನೆ, ವೈಚಾರಿಕ ಮತ್ತು ಪ್ರಗತಿಪರ ಚಿಂತನೆ  ಇಂದಿಗೂ ಪ್ರಸ್ತುತ ಎನಿಸಿಕೊಂಡಿವೆ ಎಂದು‌ ಹೇಳಿದರು.

ಜ್ಞಾನ ಮತ್ತು ಭಕ್ತಿಯ ಸಂಗಮದೊಂದಿಗೆ ಸಾಮಾಜಿಕ ಸುಧಾರಣೆ ಮತ್ತು ವ್ಯಕ್ತಿತ್ವ ವಿಕಸನ ಕುರಿತ ಚಿಂತನೆಗಳು   ಕನಕದಾಸರ ಕಾವ್ಯ ಮತ್ತು ಕೀರ್ತನೆಗಳ ಪ್ರಮುಖ ಆಶಯಗಳಾಗಿವೆ. ಸಮಾನತೆಯ ಸಮಾಜವನ್ನು ಪ್ರತಿಪಾದಿಸಿದವರು‌. ಕರ್ನಾಟಕ ಸಂಗೀತ ಮತ್ತು ಕೀರ್ತನೆಗಳಲ್ಲಿ ಸ್ಥಳೀಯ ಭಾಷೆಯ ಬಳಕೆ ಮಾಡಿದರು. ಕನಕದಾಸರು ವೈಚಾರಿಕ ಸಂತರು. ಸಮಾಜದಲ್ಲಿ ಬೇರುಬಿಟ್ಟಿದ್ದ ಮೇಲು ಕೀಳು, ಜಾತಿ-ಮತಗಳ ಬಗ್ಗೆ   ಕನಕದಾಸರ ಜನರಲ್ಲಿ ವೈಚಾರಿಕ ಪ್ರಜ್ಞೆಯನ್ನು ತಮ್ಮ ಸಾಹಿತ್ಯದ ಮೂಲಕ ಮೂಡಿಸಿದವರು ಕನಕದಾಸರು ಎಂದರು.

ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಆರ್.ನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ, ಪ್ರತಿನಿಧಿ ಷಫೀರ್, ಪ್ರೇರಣಾ ಟ್ರಸ್ಟ್‌ ಅಧ್ಯಕ್ಚೆ ನೇತ್ರಾವತಿ,   ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಮಾಜಿ ಅಧ್ಯಕ್ಷ ಬೈಲಾಂಜಿನಪ್ಪ, ಗ್ರಾಮದ ಮುಖಂಡರುಗಳಾದ ಕೃಷ್ಣಮೂರ್ತಿ, ಬೋರಲಿಂಗೇಗೌಡ, ಶಾಲೆಯ ಶಿಕ್ಷಕರುಗಳಾದ ಭಾಸ್ಕರ್, ಯೋಗನರಸಿಂಹಮೂರ್ತಿ, ಯಲ್ಲಪ್ಪ ಬಡಗಣನವರ್, ಮೇಘನಾ, ವರಲಕ್ಷ್ಮಿ, ರಜನಿ, ರೂಪ, ಅಚರ್ನಾ, ನಗ್ಮಾ, ವಿಶಾಲಾಕ್ಷಿ, ವಿದ್ಯಾಶ್ರೀ, ರಮ್ಯ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

47 minutes ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

2 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

3 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

4 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

6 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

11 hours ago