ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ಕವಿ ಹಾಗೂ ದಾರ್ಶನಿಕರಾಗಿ ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗಿರೀಶ್ ಎನ್.ಬರಗೂರು ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ದಾಸಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ, ಕನಕದಾಸರ ಬದುಕು ಮತ್ತು ಸಾಹಿತ್ಯ ಕುರಿತು ಮಾತನಾಡಿದ ಅವರು, ಕನಕದಾಸರು ಹರಿಭಕ್ತಸಾರ, ಮೋಹನತರಂಗಿಣಿ, ನಳಚರಿತೆ, ರಾಮಧಾನ್ಯ ಚರಿತೆ ಕಾವ್ಯಗಳ ಜೊತೆಗೆ ಸುಮಾರು 300ಕ್ಕೂ ಹೆಚ್ಚು ಕೀರ್ತನೆಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯವನ್ನು ಸಮೃದ್ದಿಗೊಳಿಸಿದರು ಎಂದರು.
ಕನಕದಾಸರ ಕೀರ್ತನೆಗಳ ವೈಶಿಷ್ಟ್ಯವೆಂದರೆ ಸರಳ ಭಾಷೆಯಲ್ಲಿ ವಿಷಯವನ್ನು ಮನಮುಟ್ಟುವಂತೆ ತಿಳಿಸುತ್ತವೆ. ಕನಕದಾಸರ ಕನ್ನಡ ಭಾಷೆಯ ಚಿಂತನೆ, ವೈಚಾರಿಕ ಮತ್ತು ಪ್ರಗತಿಪರ ಚಿಂತನೆ ಇಂದಿಗೂ ಪ್ರಸ್ತುತ ಎನಿಸಿಕೊಂಡಿವೆ ಎಂದು ಹೇಳಿದರು.
ಜ್ಞಾನ ಮತ್ತು ಭಕ್ತಿಯ ಸಂಗಮದೊಂದಿಗೆ ಸಾಮಾಜಿಕ ಸುಧಾರಣೆ ಮತ್ತು ವ್ಯಕ್ತಿತ್ವ ವಿಕಸನ ಕುರಿತ ಚಿಂತನೆಗಳು ಕನಕದಾಸರ ಕಾವ್ಯ ಮತ್ತು ಕೀರ್ತನೆಗಳ ಪ್ರಮುಖ ಆಶಯಗಳಾಗಿವೆ. ಸಮಾನತೆಯ ಸಮಾಜವನ್ನು ಪ್ರತಿಪಾದಿಸಿದವರು. ಕರ್ನಾಟಕ ಸಂಗೀತ ಮತ್ತು ಕೀರ್ತನೆಗಳಲ್ಲಿ ಸ್ಥಳೀಯ ಭಾಷೆಯ ಬಳಕೆ ಮಾಡಿದರು. ಕನಕದಾಸರು ವೈಚಾರಿಕ ಸಂತರು. ಸಮಾಜದಲ್ಲಿ ಬೇರುಬಿಟ್ಟಿದ್ದ ಮೇಲು ಕೀಳು, ಜಾತಿ-ಮತಗಳ ಬಗ್ಗೆ ಕನಕದಾಸರ ಜನರಲ್ಲಿ ವೈಚಾರಿಕ ಪ್ರಜ್ಞೆಯನ್ನು ತಮ್ಮ ಸಾಹಿತ್ಯದ ಮೂಲಕ ಮೂಡಿಸಿದವರು ಕನಕದಾಸರು ಎಂದರು.
ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಆರ್.ನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ, ಪ್ರತಿನಿಧಿ ಷಫೀರ್, ಪ್ರೇರಣಾ ಟ್ರಸ್ಟ್ ಅಧ್ಯಕ್ಚೆ ನೇತ್ರಾವತಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಮಾಜಿ ಅಧ್ಯಕ್ಷ ಬೈಲಾಂಜಿನಪ್ಪ, ಗ್ರಾಮದ ಮುಖಂಡರುಗಳಾದ ಕೃಷ್ಣಮೂರ್ತಿ, ಬೋರಲಿಂಗೇಗೌಡ, ಶಾಲೆಯ ಶಿಕ್ಷಕರುಗಳಾದ ಭಾಸ್ಕರ್, ಯೋಗನರಸಿಂಹಮೂರ್ತಿ, ಯಲ್ಲಪ್ಪ ಬಡಗಣನವರ್, ಮೇಘನಾ, ವರಲಕ್ಷ್ಮಿ, ರಜನಿ, ರೂಪ, ಅಚರ್ನಾ, ನಗ್ಮಾ, ವಿಶಾಲಾಕ್ಷಿ, ವಿದ್ಯಾಶ್ರೀ, ರಮ್ಯ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…