ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಕನಕದಾಸರ ಕೊಡುಗೆ ಅಪಾರ- ಉಪನ್ಯಾಸಕ ಗಿರೀಶ್ ಎನ್.ಬರಗೂರು

ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ಕವಿ‌ ಹಾಗೂ ದಾರ್ಶನಿಕರಾಗಿ ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗಿರೀಶ್ ಎನ್.ಬರಗೂರು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ದಾಸಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ, ಕನಕದಾಸರ ಬದುಕು ಮತ್ತು ಸಾಹಿತ್ಯ ಕುರಿತು ಮಾತನಾಡಿದ ಅವರು, ಕನಕದಾಸರು  ಹರಿಭಕ್ತಸಾರ, ಮೋಹನತರಂಗಿಣಿ,  ನಳಚರಿತೆ,  ರಾಮಧಾನ್ಯ ಚರಿತೆ ಕಾವ್ಯಗಳ ಜೊತೆಗೆ ಸುಮಾರು 300ಕ್ಕೂ ಹೆಚ್ಚು ಕೀರ್ತನೆಗಳನ್ನು ರಚಿಸುವ ಮೂಲಕ  ಕನ್ನಡ ಸಾಹಿತ್ಯವನ್ನು ಸಮೃದ್ದಿಗೊಳಿಸಿದರು ಎಂದರು.

ಕನಕದಾಸರ ಕೀರ್ತನೆಗಳ ವೈಶಿಷ್ಟ್ಯವೆಂದರೆ ಸರಳ ಭಾಷೆಯಲ್ಲಿ ವಿಷಯವನ್ನು ಮನಮುಟ್ಟುವಂತೆ ತಿಳಿಸುತ್ತವೆ.  ಕನಕದಾಸರ ಕನ್ನಡ ಭಾಷೆಯ ಚಿಂತನೆ, ವೈಚಾರಿಕ ಮತ್ತು ಪ್ರಗತಿಪರ ಚಿಂತನೆ  ಇಂದಿಗೂ ಪ್ರಸ್ತುತ ಎನಿಸಿಕೊಂಡಿವೆ ಎಂದು‌ ಹೇಳಿದರು.

ಜ್ಞಾನ ಮತ್ತು ಭಕ್ತಿಯ ಸಂಗಮದೊಂದಿಗೆ ಸಾಮಾಜಿಕ ಸುಧಾರಣೆ ಮತ್ತು ವ್ಯಕ್ತಿತ್ವ ವಿಕಸನ ಕುರಿತ ಚಿಂತನೆಗಳು   ಕನಕದಾಸರ ಕಾವ್ಯ ಮತ್ತು ಕೀರ್ತನೆಗಳ ಪ್ರಮುಖ ಆಶಯಗಳಾಗಿವೆ. ಸಮಾನತೆಯ ಸಮಾಜವನ್ನು ಪ್ರತಿಪಾದಿಸಿದವರು‌. ಕರ್ನಾಟಕ ಸಂಗೀತ ಮತ್ತು ಕೀರ್ತನೆಗಳಲ್ಲಿ ಸ್ಥಳೀಯ ಭಾಷೆಯ ಬಳಕೆ ಮಾಡಿದರು. ಕನಕದಾಸರು ವೈಚಾರಿಕ ಸಂತರು. ಸಮಾಜದಲ್ಲಿ ಬೇರುಬಿಟ್ಟಿದ್ದ ಮೇಲು ಕೀಳು, ಜಾತಿ-ಮತಗಳ ಬಗ್ಗೆ   ಕನಕದಾಸರ ಜನರಲ್ಲಿ ವೈಚಾರಿಕ ಪ್ರಜ್ಞೆಯನ್ನು ತಮ್ಮ ಸಾಹಿತ್ಯದ ಮೂಲಕ ಮೂಡಿಸಿದವರು ಕನಕದಾಸರು ಎಂದರು.

ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಆರ್.ನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ, ಪ್ರತಿನಿಧಿ ಷಫೀರ್, ಪ್ರೇರಣಾ ಟ್ರಸ್ಟ್‌ ಅಧ್ಯಕ್ಚೆ ನೇತ್ರಾವತಿ,   ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಮಾಜಿ ಅಧ್ಯಕ್ಷ ಬೈಲಾಂಜಿನಪ್ಪ, ಗ್ರಾಮದ ಮುಖಂಡರುಗಳಾದ ಕೃಷ್ಣಮೂರ್ತಿ, ಬೋರಲಿಂಗೇಗೌಡ, ಶಾಲೆಯ ಶಿಕ್ಷಕರುಗಳಾದ ಭಾಸ್ಕರ್, ಯೋಗನರಸಿಂಹಮೂರ್ತಿ, ಯಲ್ಲಪ್ಪ ಬಡಗಣನವರ್, ಮೇಘನಾ, ವರಲಕ್ಷ್ಮಿ, ರಜನಿ, ರೂಪ, ಅಚರ್ನಾ, ನಗ್ಮಾ, ವಿಶಾಲಾಕ್ಷಿ, ವಿದ್ಯಾಶ್ರೀ, ರಮ್ಯ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

8 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

12 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

13 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

20 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago