ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಡಾ.ಲೀಲಾವತಿ ಇನ್ನಿಲ್ಲ

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ (85) ಅವರು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.

ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆ, ಲೀಲಾವತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಎಂದು ಲೋ ಬಿಪಿ ಸಮಸ್ಯೆ ಶುರುವಾಗಿತ್ತು. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಲೀಲಾವತಿ ನಿಧನರಾಗಿದ್ದಾರೆ‌ ಎನ್ನಲಾಗಿದೆ.

ಐದು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಡಾ. ಲೀಲಾವತಿ ಅವರು *ನಾ ನಿನ್ನ ಮರೆಯಲಾರೆ* ಚಿತ್ರದಲ್ಲಿ ಚಿತ್ರದ ನಾಯಕಿಯ ತಾಯಿಯಾಗಿ ತನ್ನ ಮಗಳು ಪ್ರೇಮಿಸುವ ಹುಡುಗನನ್ನು ಅಳಿಯನನ್ನಾಗಿ ಅಂಗೀಕರಿಸದೇ ಆಕೆಗೆ ಬೇರೆ ಮದುವೆ ಮಾಡಿ ತನ್ನ *ಪ್ರತಾಪ* ತೋರಿ ಮಗಳ ಪ್ರೇಮ ವಿವಾಹದ ಕನಸನ್ನು ನುಚ್ಚುನೂರು ಮಾಡಿ ತನ್ನ ಇಚ್ಛೆಯಂತೆ *ವಿಜಯ* ಸಾಧಿಸುವ ಪಾತ್ರ ಆ ಕಾಲದಲ್ಲಿ *ಇಡೀ ಯುವ ಸಮೂಹವನ್ನೇ ರೊಚ್ಚಿಗೆಬ್ಬಿಸಿತ್ತು* ಎಂದರೆ ಆ ಪಾತ್ರದಲ್ಲಿ ಡಾ ಲೀಲಾವತಿ ಅವರ ಪರಕಾಯ ಪ್ರವೇಶ ಹೇಗಿತ್ತು ? ಎಂಬುದಕ್ಕೆ ಸಾಕ್ಷಿ.

ಲೀಲಾವತಿ (1938)ದಕ್ಷಿಣ ಭಾರತದ ನಟಿ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000-ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು 2008ರಲ್ಲಿ ಪಡೆದರು.

ವೈಯಕ್ತಿಕ ಜೀವನ

ಲೀಲಾ ಕಿರಣ್ ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು.

ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.

ಚಿತ್ರ ಜೀವನ
ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.

ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ.

ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

70ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಮುಂತಾದ ಚಿತ್ರಗಳು ಪ್ರಮುಖವಾದವು.

ಪ್ರಶಸ್ತಿ-ಪುರಸ್ಕಾರಗಳು

2008 – ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
2006- ಅತ್ತ್ಯುತ್ತಮ ಪೋಷಕನಟಿ ಫಿಲಂಫೇರ್ ಕನ್ನಡ – ಕನ್ನಡದ ಕಂದ
1999-2000 – ಡಾ. ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು:

ಅತ್ತ್ಯುತ್ತಮ ಪೋಷಕನಟಿ ಪ್ರಶಸ್ತಿ

1960-70-ಗೆಜ್ಜೆಪೂಜೆ
1971-72-ಸಿಪಾಯಿ ರಾಮು
1989-90- ಡಾಕ್ಟರ್ ಕೃಷ್ಣ
ಸಮಾಜಸೇವೆ

ಮದುವೆ ಮಾಡಿ ನೋಡು ಹಾಗೂ ಸಂತ ತುಕಾರಾಂ ಚಿತ್ರಗಳಲ್ಲಿನ ಅಭಿನಯಕ್ಕೆ ಲೀಲಾವತಿ ಅವರಿಗೆ ರಾಷ್ಟ್ರ ಪ್ರಶಸ್ತಿಗಳು ಲಭಿಸಿವೆ.

ನೆಲಮಂಗಲದ ಸುತ್ತಮುತ್ತ ವಾಸಿಸುವ ಜನರ ಆರೋಗ್ಯ ಸೇವೆಗಾಗಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಲೀಲಾವತಿ ಕಟ್ಟಿಸಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

29 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago