ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಡಾ.ಲೀಲಾವತಿ ಇನ್ನಿಲ್ಲ

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ (85) ಅವರು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.

ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆ, ಲೀಲಾವತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಎಂದು ಲೋ ಬಿಪಿ ಸಮಸ್ಯೆ ಶುರುವಾಗಿತ್ತು. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಲೀಲಾವತಿ ನಿಧನರಾಗಿದ್ದಾರೆ‌ ಎನ್ನಲಾಗಿದೆ.

ಐದು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಡಾ. ಲೀಲಾವತಿ ಅವರು *ನಾ ನಿನ್ನ ಮರೆಯಲಾರೆ* ಚಿತ್ರದಲ್ಲಿ ಚಿತ್ರದ ನಾಯಕಿಯ ತಾಯಿಯಾಗಿ ತನ್ನ ಮಗಳು ಪ್ರೇಮಿಸುವ ಹುಡುಗನನ್ನು ಅಳಿಯನನ್ನಾಗಿ ಅಂಗೀಕರಿಸದೇ ಆಕೆಗೆ ಬೇರೆ ಮದುವೆ ಮಾಡಿ ತನ್ನ *ಪ್ರತಾಪ* ತೋರಿ ಮಗಳ ಪ್ರೇಮ ವಿವಾಹದ ಕನಸನ್ನು ನುಚ್ಚುನೂರು ಮಾಡಿ ತನ್ನ ಇಚ್ಛೆಯಂತೆ *ವಿಜಯ* ಸಾಧಿಸುವ ಪಾತ್ರ ಆ ಕಾಲದಲ್ಲಿ *ಇಡೀ ಯುವ ಸಮೂಹವನ್ನೇ ರೊಚ್ಚಿಗೆಬ್ಬಿಸಿತ್ತು* ಎಂದರೆ ಆ ಪಾತ್ರದಲ್ಲಿ ಡಾ ಲೀಲಾವತಿ ಅವರ ಪರಕಾಯ ಪ್ರವೇಶ ಹೇಗಿತ್ತು ? ಎಂಬುದಕ್ಕೆ ಸಾಕ್ಷಿ.

ಲೀಲಾವತಿ (1938)ದಕ್ಷಿಣ ಭಾರತದ ನಟಿ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000-ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು 2008ರಲ್ಲಿ ಪಡೆದರು.

ವೈಯಕ್ತಿಕ ಜೀವನ

ಲೀಲಾ ಕಿರಣ್ ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು.

ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.

ಚಿತ್ರ ಜೀವನ
ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.

ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ.

ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

70ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಮುಂತಾದ ಚಿತ್ರಗಳು ಪ್ರಮುಖವಾದವು.

ಪ್ರಶಸ್ತಿ-ಪುರಸ್ಕಾರಗಳು

2008 – ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
2006- ಅತ್ತ್ಯುತ್ತಮ ಪೋಷಕನಟಿ ಫಿಲಂಫೇರ್ ಕನ್ನಡ – ಕನ್ನಡದ ಕಂದ
1999-2000 – ಡಾ. ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು:

ಅತ್ತ್ಯುತ್ತಮ ಪೋಷಕನಟಿ ಪ್ರಶಸ್ತಿ

1960-70-ಗೆಜ್ಜೆಪೂಜೆ
1971-72-ಸಿಪಾಯಿ ರಾಮು
1989-90- ಡಾಕ್ಟರ್ ಕೃಷ್ಣ
ಸಮಾಜಸೇವೆ

ಮದುವೆ ಮಾಡಿ ನೋಡು ಹಾಗೂ ಸಂತ ತುಕಾರಾಂ ಚಿತ್ರಗಳಲ್ಲಿನ ಅಭಿನಯಕ್ಕೆ ಲೀಲಾವತಿ ಅವರಿಗೆ ರಾಷ್ಟ್ರ ಪ್ರಶಸ್ತಿಗಳು ಲಭಿಸಿವೆ.

ನೆಲಮಂಗಲದ ಸುತ್ತಮುತ್ತ ವಾಸಿಸುವ ಜನರ ಆರೋಗ್ಯ ಸೇವೆಗಾಗಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಲೀಲಾವತಿ ಕಟ್ಟಿಸಿದ್ದಾರೆ.

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

29 minutes ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

5 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

7 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

10 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago