ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಡಾ.ಲೀಲಾವತಿ ಇನ್ನಿಲ್ಲ

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ (85) ಅವರು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.

ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆ, ಲೀಲಾವತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಎಂದು ಲೋ ಬಿಪಿ ಸಮಸ್ಯೆ ಶುರುವಾಗಿತ್ತು. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಲೀಲಾವತಿ ನಿಧನರಾಗಿದ್ದಾರೆ‌ ಎನ್ನಲಾಗಿದೆ.

ಐದು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಡಾ. ಲೀಲಾವತಿ ಅವರು *ನಾ ನಿನ್ನ ಮರೆಯಲಾರೆ* ಚಿತ್ರದಲ್ಲಿ ಚಿತ್ರದ ನಾಯಕಿಯ ತಾಯಿಯಾಗಿ ತನ್ನ ಮಗಳು ಪ್ರೇಮಿಸುವ ಹುಡುಗನನ್ನು ಅಳಿಯನನ್ನಾಗಿ ಅಂಗೀಕರಿಸದೇ ಆಕೆಗೆ ಬೇರೆ ಮದುವೆ ಮಾಡಿ ತನ್ನ *ಪ್ರತಾಪ* ತೋರಿ ಮಗಳ ಪ್ರೇಮ ವಿವಾಹದ ಕನಸನ್ನು ನುಚ್ಚುನೂರು ಮಾಡಿ ತನ್ನ ಇಚ್ಛೆಯಂತೆ *ವಿಜಯ* ಸಾಧಿಸುವ ಪಾತ್ರ ಆ ಕಾಲದಲ್ಲಿ *ಇಡೀ ಯುವ ಸಮೂಹವನ್ನೇ ರೊಚ್ಚಿಗೆಬ್ಬಿಸಿತ್ತು* ಎಂದರೆ ಆ ಪಾತ್ರದಲ್ಲಿ ಡಾ ಲೀಲಾವತಿ ಅವರ ಪರಕಾಯ ಪ್ರವೇಶ ಹೇಗಿತ್ತು ? ಎಂಬುದಕ್ಕೆ ಸಾಕ್ಷಿ.

ಲೀಲಾವತಿ (1938)ದಕ್ಷಿಣ ಭಾರತದ ನಟಿ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000-ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು 2008ರಲ್ಲಿ ಪಡೆದರು.

ವೈಯಕ್ತಿಕ ಜೀವನ

ಲೀಲಾ ಕಿರಣ್ ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು.

ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.

ಚಿತ್ರ ಜೀವನ
ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.

ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ.

ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

70ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಮುಂತಾದ ಚಿತ್ರಗಳು ಪ್ರಮುಖವಾದವು.

ಪ್ರಶಸ್ತಿ-ಪುರಸ್ಕಾರಗಳು

2008 – ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
2006- ಅತ್ತ್ಯುತ್ತಮ ಪೋಷಕನಟಿ ಫಿಲಂಫೇರ್ ಕನ್ನಡ – ಕನ್ನಡದ ಕಂದ
1999-2000 – ಡಾ. ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು:

ಅತ್ತ್ಯುತ್ತಮ ಪೋಷಕನಟಿ ಪ್ರಶಸ್ತಿ

1960-70-ಗೆಜ್ಜೆಪೂಜೆ
1971-72-ಸಿಪಾಯಿ ರಾಮು
1989-90- ಡಾಕ್ಟರ್ ಕೃಷ್ಣ
ಸಮಾಜಸೇವೆ

ಮದುವೆ ಮಾಡಿ ನೋಡು ಹಾಗೂ ಸಂತ ತುಕಾರಾಂ ಚಿತ್ರಗಳಲ್ಲಿನ ಅಭಿನಯಕ್ಕೆ ಲೀಲಾವತಿ ಅವರಿಗೆ ರಾಷ್ಟ್ರ ಪ್ರಶಸ್ತಿಗಳು ಲಭಿಸಿವೆ.

ನೆಲಮಂಗಲದ ಸುತ್ತಮುತ್ತ ವಾಸಿಸುವ ಜನರ ಆರೋಗ್ಯ ಸೇವೆಗಾಗಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಲೀಲಾವತಿ ಕಟ್ಟಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

6 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

13 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

14 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago