ಕನ್ನಡ ಸುಗಮ ಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದವರು ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ-ಕೆ.ಆರ್.ರವಿಕಿರಣ್

ಕನ್ನಡ ಸುಗಮ ಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದವರು ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಸಾಹಿತಿಗಳ ಯಾವ ಪಂಥಕ್ಕೂ ಸೇರದ ಡಾ.ಎಚ್.ಎಸ್.ವೆಂಕಟೇಶಮೂರ್ತಿ ತಮ್ಮ ಸೃಜನಶೀಲತೆಯನ್ನು ನಿರಂತರವಾಗಿ ಉಳಿಸಿಕೊಂಡು ಬಂದವರು. ಕಾವ್ಯ, ನಾಟಕ, ವಿಮರ್ಶೆ, ಕಥೆ, ಕಾದಂಬರಿ, ಮಕ್ಕಳ ಸಾಹಿತ್ಯ ಮುಂತಾದ ಹಲವು ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡುವ‌‌ ಮೂಲಕ‌ ಕನ್ನಡ ಸಾಹಿತ್ಯಕ್ಕೆ ಉತ್ತಮ‌ ಕೊಡುಗೆ ನೀಡಿದರು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಕೋಶಾಧ್ಯಕ್ಷ ನಂ.ಮಹಾದೇವ ಮಾತನಾಡಿ, ಡಾ.ಎಚ್.ಎಸ್. ವೆಂಕಟೇಶ ಮೂರ್ತಿಯವರ ಬುದ್ಧಚರಣ ಮಹಾಕಾವ್ಯ ಗಮಕವಾಚನ ಮತ್ತು ಗೀತಗಾಯನದ ಮೂಲಕ‌ ಸಹೃದಯರಿಗೆ ಸುಲಭವಾಗಿ ಅರ್ಥವಾಗುತ್ತದೆ. ಮಹಾಕಾವ್ಯ ಪರಂಪರೆಯನ್ನು ಮುಂದುವರಿಸಿದ ಕವಿ ಎಲ್ಲಾ ವಯೋಮಾನದ ಓದುಗರಿಗೂ ಪ್ರೀತಿ ಪಾತ್ರರಾಗಿದ್ದರು ಎಂದರು.

ಜವಾಹರ್ ನವೋದಯ ವಿದ್ಯಾಲಯದ  ನಿವೃತ್ತ  ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸುಗಮ ಸಂಗೀತ, ಕಿರುತೆರೆ, ಸಿನಿಮಾ ಕ್ಷೇತ್ರದಲ್ಲೂ ಗಣನೀಯ ಸಾಧನೆ ಮಾಡಿದ್ದಾರೆ. ಐದು ಬೆರಳು ಕೂಡಿ ಒಂದು ಮುಷ್ಟಿಯು ಹಲವು ಮಂದಿ ಸೇರಿ ಈ ಸಮಷ್ಟಿಯು ಬೇರೆ ಬೇರೆ ಒಕ್ಕಲು ಒಂದೆ ತಾಯ ಮಕ್ಕಳು” ಎಂದು ಬರೆದ ಈ ಹಾಡು ರಾಷ್ಟ್ರೀಯ ಭಾವನೆಗಳನ್ನು ತೋರಿಸುತ್ತದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಗಾಯಕ ಸಿ.ಅಶ್ವಥ್ ಮತ್ತು ಕವಿ ಎಚ್.ಎಸ್.ವೆಂಕಟೇಶಮೂರ್ತಿ ಜೋಡಿ ಕನ್ನಡ ಭಾವಗೀತೆ ಮೂಲಕ ಜನಪ್ರಿಯರಾದವರು. ಚಲನಚಿತ್ರ ಮತ್ತು ರಂಗಭೂಮಿಯೊಡನೆ ನಿರಂತರ ಸಂಪರ್ಕ ಹೊಂದಿದ್ದ ಅವರು ಚಲನಚಿತ್ರಗಳಿಗೆ ರಚಿಸಿದ ಹಾಡುಗಳು,  ಸಂಭಾಷಣೆ. ದೂರದರ್ಶನ ಧಾರಾವಾಹಿಗಳಿಗೆ ಶೀರ್ಷಿಕೆ ಗೀತೆ. ಭಾವಗೀತೆಗಳ ಧ್ವನಿ ಸುರಳಿಗಳಿಗೆ  ರಚಿಸಿದ ಹಾಡುಗಳು ಕನ್ನಡಿಗರ ಮನಗೆದ್ದಿವೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ  ಎಂ.ಸಿ.ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಜ್ಞಾನಗಂಗಾ ಪ್ರೌಢಶಾಲೆ ಶಿಕ್ಷಕ ಕೋದಂಡರಾಮ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಾಸಲು ಹೋಬಳಿ ಘಟಕ ಅಧ್ಯಕ್ಷ ಜಿ.ಎಂ.ನಾಗರಾಜು ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಷಫೀರ್,  ಕಲಾವಿದ ಬಾಶೆಟ್ಟಿಹಳ್ಳಿ ಮಂಜುನಾಥ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

9 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

11 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

14 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

14 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

21 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

21 hours ago