ಕನ್ನಡ ಸುಗಮ ಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದವರು ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ-ಕೆ.ಆರ್.ರವಿಕಿರಣ್

ಕನ್ನಡ ಸುಗಮ ಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದವರು ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಸಾಹಿತಿಗಳ ಯಾವ ಪಂಥಕ್ಕೂ ಸೇರದ ಡಾ.ಎಚ್.ಎಸ್.ವೆಂಕಟೇಶಮೂರ್ತಿ ತಮ್ಮ ಸೃಜನಶೀಲತೆಯನ್ನು ನಿರಂತರವಾಗಿ ಉಳಿಸಿಕೊಂಡು ಬಂದವರು. ಕಾವ್ಯ, ನಾಟಕ, ವಿಮರ್ಶೆ, ಕಥೆ, ಕಾದಂಬರಿ, ಮಕ್ಕಳ ಸಾಹಿತ್ಯ ಮುಂತಾದ ಹಲವು ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡುವ‌‌ ಮೂಲಕ‌ ಕನ್ನಡ ಸಾಹಿತ್ಯಕ್ಕೆ ಉತ್ತಮ‌ ಕೊಡುಗೆ ನೀಡಿದರು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಕೋಶಾಧ್ಯಕ್ಷ ನಂ.ಮಹಾದೇವ ಮಾತನಾಡಿ, ಡಾ.ಎಚ್.ಎಸ್. ವೆಂಕಟೇಶ ಮೂರ್ತಿಯವರ ಬುದ್ಧಚರಣ ಮಹಾಕಾವ್ಯ ಗಮಕವಾಚನ ಮತ್ತು ಗೀತಗಾಯನದ ಮೂಲಕ‌ ಸಹೃದಯರಿಗೆ ಸುಲಭವಾಗಿ ಅರ್ಥವಾಗುತ್ತದೆ. ಮಹಾಕಾವ್ಯ ಪರಂಪರೆಯನ್ನು ಮುಂದುವರಿಸಿದ ಕವಿ ಎಲ್ಲಾ ವಯೋಮಾನದ ಓದುಗರಿಗೂ ಪ್ರೀತಿ ಪಾತ್ರರಾಗಿದ್ದರು ಎಂದರು.

ಜವಾಹರ್ ನವೋದಯ ವಿದ್ಯಾಲಯದ  ನಿವೃತ್ತ  ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸುಗಮ ಸಂಗೀತ, ಕಿರುತೆರೆ, ಸಿನಿಮಾ ಕ್ಷೇತ್ರದಲ್ಲೂ ಗಣನೀಯ ಸಾಧನೆ ಮಾಡಿದ್ದಾರೆ. ಐದು ಬೆರಳು ಕೂಡಿ ಒಂದು ಮುಷ್ಟಿಯು ಹಲವು ಮಂದಿ ಸೇರಿ ಈ ಸಮಷ್ಟಿಯು ಬೇರೆ ಬೇರೆ ಒಕ್ಕಲು ಒಂದೆ ತಾಯ ಮಕ್ಕಳು” ಎಂದು ಬರೆದ ಈ ಹಾಡು ರಾಷ್ಟ್ರೀಯ ಭಾವನೆಗಳನ್ನು ತೋರಿಸುತ್ತದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಗಾಯಕ ಸಿ.ಅಶ್ವಥ್ ಮತ್ತು ಕವಿ ಎಚ್.ಎಸ್.ವೆಂಕಟೇಶಮೂರ್ತಿ ಜೋಡಿ ಕನ್ನಡ ಭಾವಗೀತೆ ಮೂಲಕ ಜನಪ್ರಿಯರಾದವರು. ಚಲನಚಿತ್ರ ಮತ್ತು ರಂಗಭೂಮಿಯೊಡನೆ ನಿರಂತರ ಸಂಪರ್ಕ ಹೊಂದಿದ್ದ ಅವರು ಚಲನಚಿತ್ರಗಳಿಗೆ ರಚಿಸಿದ ಹಾಡುಗಳು,  ಸಂಭಾಷಣೆ. ದೂರದರ್ಶನ ಧಾರಾವಾಹಿಗಳಿಗೆ ಶೀರ್ಷಿಕೆ ಗೀತೆ. ಭಾವಗೀತೆಗಳ ಧ್ವನಿ ಸುರಳಿಗಳಿಗೆ  ರಚಿಸಿದ ಹಾಡುಗಳು ಕನ್ನಡಿಗರ ಮನಗೆದ್ದಿವೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ  ಎಂ.ಸಿ.ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಜ್ಞಾನಗಂಗಾ ಪ್ರೌಢಶಾಲೆ ಶಿಕ್ಷಕ ಕೋದಂಡರಾಮ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಾಸಲು ಹೋಬಳಿ ಘಟಕ ಅಧ್ಯಕ್ಷ ಜಿ.ಎಂ.ನಾಗರಾಜು ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಷಫೀರ್,  ಕಲಾವಿದ ಬಾಶೆಟ್ಟಿಹಳ್ಳಿ ಮಂಜುನಾಥ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

46 minutes ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

5 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

11 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago