ಕನ್ನಡ ಸುಗಮ ಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದವರು ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ-ಕೆ.ಆರ್.ರವಿಕಿರಣ್

ಕನ್ನಡ ಸುಗಮ ಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದವರು ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಸಾಹಿತಿಗಳ ಯಾವ ಪಂಥಕ್ಕೂ ಸೇರದ ಡಾ.ಎಚ್.ಎಸ್.ವೆಂಕಟೇಶಮೂರ್ತಿ ತಮ್ಮ ಸೃಜನಶೀಲತೆಯನ್ನು ನಿರಂತರವಾಗಿ ಉಳಿಸಿಕೊಂಡು ಬಂದವರು. ಕಾವ್ಯ, ನಾಟಕ, ವಿಮರ್ಶೆ, ಕಥೆ, ಕಾದಂಬರಿ, ಮಕ್ಕಳ ಸಾಹಿತ್ಯ ಮುಂತಾದ ಹಲವು ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡುವ‌‌ ಮೂಲಕ‌ ಕನ್ನಡ ಸಾಹಿತ್ಯಕ್ಕೆ ಉತ್ತಮ‌ ಕೊಡುಗೆ ನೀಡಿದರು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಕೋಶಾಧ್ಯಕ್ಷ ನಂ.ಮಹಾದೇವ ಮಾತನಾಡಿ, ಡಾ.ಎಚ್.ಎಸ್. ವೆಂಕಟೇಶ ಮೂರ್ತಿಯವರ ಬುದ್ಧಚರಣ ಮಹಾಕಾವ್ಯ ಗಮಕವಾಚನ ಮತ್ತು ಗೀತಗಾಯನದ ಮೂಲಕ‌ ಸಹೃದಯರಿಗೆ ಸುಲಭವಾಗಿ ಅರ್ಥವಾಗುತ್ತದೆ. ಮಹಾಕಾವ್ಯ ಪರಂಪರೆಯನ್ನು ಮುಂದುವರಿಸಿದ ಕವಿ ಎಲ್ಲಾ ವಯೋಮಾನದ ಓದುಗರಿಗೂ ಪ್ರೀತಿ ಪಾತ್ರರಾಗಿದ್ದರು ಎಂದರು.

ಜವಾಹರ್ ನವೋದಯ ವಿದ್ಯಾಲಯದ  ನಿವೃತ್ತ  ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸುಗಮ ಸಂಗೀತ, ಕಿರುತೆರೆ, ಸಿನಿಮಾ ಕ್ಷೇತ್ರದಲ್ಲೂ ಗಣನೀಯ ಸಾಧನೆ ಮಾಡಿದ್ದಾರೆ. ಐದು ಬೆರಳು ಕೂಡಿ ಒಂದು ಮುಷ್ಟಿಯು ಹಲವು ಮಂದಿ ಸೇರಿ ಈ ಸಮಷ್ಟಿಯು ಬೇರೆ ಬೇರೆ ಒಕ್ಕಲು ಒಂದೆ ತಾಯ ಮಕ್ಕಳು” ಎಂದು ಬರೆದ ಈ ಹಾಡು ರಾಷ್ಟ್ರೀಯ ಭಾವನೆಗಳನ್ನು ತೋರಿಸುತ್ತದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಗಾಯಕ ಸಿ.ಅಶ್ವಥ್ ಮತ್ತು ಕವಿ ಎಚ್.ಎಸ್.ವೆಂಕಟೇಶಮೂರ್ತಿ ಜೋಡಿ ಕನ್ನಡ ಭಾವಗೀತೆ ಮೂಲಕ ಜನಪ್ರಿಯರಾದವರು. ಚಲನಚಿತ್ರ ಮತ್ತು ರಂಗಭೂಮಿಯೊಡನೆ ನಿರಂತರ ಸಂಪರ್ಕ ಹೊಂದಿದ್ದ ಅವರು ಚಲನಚಿತ್ರಗಳಿಗೆ ರಚಿಸಿದ ಹಾಡುಗಳು,  ಸಂಭಾಷಣೆ. ದೂರದರ್ಶನ ಧಾರಾವಾಹಿಗಳಿಗೆ ಶೀರ್ಷಿಕೆ ಗೀತೆ. ಭಾವಗೀತೆಗಳ ಧ್ವನಿ ಸುರಳಿಗಳಿಗೆ  ರಚಿಸಿದ ಹಾಡುಗಳು ಕನ್ನಡಿಗರ ಮನಗೆದ್ದಿವೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ  ಎಂ.ಸಿ.ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಜ್ಞಾನಗಂಗಾ ಪ್ರೌಢಶಾಲೆ ಶಿಕ್ಷಕ ಕೋದಂಡರಾಮ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಾಸಲು ಹೋಬಳಿ ಘಟಕ ಅಧ್ಯಕ್ಷ ಜಿ.ಎಂ.ನಾಗರಾಜು ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಷಫೀರ್,  ಕಲಾವಿದ ಬಾಶೆಟ್ಟಿಹಳ್ಳಿ ಮಂಜುನಾಥ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

2 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

6 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

8 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

19 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

20 hours ago