Categories: ಮೈಸೂರು

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ – ಸಿಎಂ ಸಿದ್ದರಾಮಯ್ಯ

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಹೇಳಿದರು.

ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ
ಗೋವಿಂದು ಅವರ ಬೇಡಿಕೆಗೆ ವಿಚಾರವಾಗಿ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸಲಾಗುವುದು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ ಎಂದು ತಿಳಿಸಿದರು.

ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.

ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಹೇಳಿದರು.

MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.

ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ. ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು ಹೇಳಿದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

7 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

7 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

10 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

18 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

20 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago