Categories: ಮೈಸೂರು

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ – ಸಿಎಂ ಸಿದ್ದರಾಮಯ್ಯ

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಹೇಳಿದರು.

ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ
ಗೋವಿಂದು ಅವರ ಬೇಡಿಕೆಗೆ ವಿಚಾರವಾಗಿ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸಲಾಗುವುದು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ ಎಂದು ತಿಳಿಸಿದರು.

ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.

ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಹೇಳಿದರು.

MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.

ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ. ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು ಹೇಳಿದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

7 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago