Categories: ಮೈಸೂರು

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ – ಸಿಎಂ ಸಿದ್ದರಾಮಯ್ಯ

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಹೇಳಿದರು.

ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ
ಗೋವಿಂದು ಅವರ ಬೇಡಿಕೆಗೆ ವಿಚಾರವಾಗಿ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸಲಾಗುವುದು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ ಎಂದು ತಿಳಿಸಿದರು.

ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.

ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಹೇಳಿದರು.

MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.

ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ. ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು ಹೇಳಿದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

7 hours ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

19 hours ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

1 day ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

1 day ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

2 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago