ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಹೇಳಿದರು.
ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ
ಗೋವಿಂದು ಅವರ ಬೇಡಿಕೆಗೆ ವಿಚಾರವಾಗಿ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸಲಾಗುವುದು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ ಎಂದು ತಿಳಿಸಿದರು.
ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.
ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಹೇಳಿದರು.
MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.
ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ. ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು ಹೇಳಿದರು.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…