Categories: ಮೈಸೂರು

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ – ಸಿಎಂ ಸಿದ್ದರಾಮಯ್ಯ

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಹೇಳಿದರು.

ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ
ಗೋವಿಂದು ಅವರ ಬೇಡಿಕೆಗೆ ವಿಚಾರವಾಗಿ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸಲಾಗುವುದು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ ಎಂದು ತಿಳಿಸಿದರು.

ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.

ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಹೇಳಿದರು.

MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.

ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ. ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು ಹೇಳಿದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

5 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

6 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

10 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

11 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

16 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

18 hours ago