Categories: ಮೈಸೂರು

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ – ಸಿಎಂ ಸಿದ್ದರಾಮಯ್ಯ

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಹೇಳಿದರು.

ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ
ಗೋವಿಂದು ಅವರ ಬೇಡಿಕೆಗೆ ವಿಚಾರವಾಗಿ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸಲಾಗುವುದು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ ಎಂದು ತಿಳಿಸಿದರು.

ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.

ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಹೇಳಿದರು.

MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.

ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ. ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು ಹೇಳಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

12 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

12 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

13 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

13 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

15 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

19 hours ago