ಕನ್ನಮಂಗಲ‌ ಗ್ರಾ. ಪಂ ಪಿಡಿಒ ವಿರುದ್ದ ಕ್ರಮ ಕೈಗೊಂಡರೆ ಬೃಹತ್ ಹೋರಾಟ ನಡೆಸಲಾಗುವುದು-ದಲಿತ ಸಂಘರ್ಷ ಸಮಿತಿ(ಭೀಮಶಕ್ತಿ)ಯ ಮುಖಂಡ ಮುರುಳಿ‌ ಎಚ್ಚರಿಕೆ

ಕನ್ನಮಂಗಲ‌ ಗ್ರಾಮ ಪಂಚಾಯಿತಿ ಹಾಗೂ ಅಧಿಕಾರಿಗಳ ವಿರುದ್ದ ಮಾಧ್ಯಮಗಳಲ್ಲಿ ತೇಜೋವಧೆ ಮಾಡುತ್ತಿರುವ ದೊಡ್ಡಪನಹಳ್ಳಿ ಗ್ರಾಮದ ಕೆ.ಸೋಮಶೇಖರ್ ಅವರನ್ನು ಕೂಡಲೇ ಗ್ರಾ.ಪಂ. ಸದಸ್ಯ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿ ಉಳಿದ 25 ಸದಸ್ಯರು, ಪೂಜನಹಳ್ಳಿ ಗ್ರಾಮಸ್ಥರು ಹಾಗೂ ದಲಿತಪರ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಬಲಾಢ್ಯರ ಪರವಾಗಿ ದುರುದ್ದೇಶದಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಸೋಮಶೇಖರ್ ವಿರುದ್ದ ತಕ್ಷಣವೇ ಎಫ್ ಐಆರ್ ದಾಖಲಿಸಿ, ಕಾನೂನು ಕ್ರಮ ಜರುಗಿಸುವಂತೆಯೂ ಪ್ರತಿಭಟನಾನಿರತರು ಆಗ್ರಹಿಸಿದರು.

ಪ್ರತಿಭಟನೆಯ ವೇಳೆ ಬಹುತೇಕರು ತಮ್ಮ ಆಧಾರ್ ಕಾರ್ಡ್ ತೋರಿಸಿ, ನಾವೆಲ್ಲರೂ ಪೂಜನಹಳ್ಳಿ ಗ್ರಾಮಸ್ಥರೇ ಹೊರತು ಬಾಡಿಗೆಯವರಲ್ಲ ಎಂದು ಸೋಮಶೇಖರ್ ಅವರಿಗೆ ತಿರುಗೇಟು ನೀಡಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಲಿತ ಸಂಘರ್ಷ ಸಮಿತಿ(ಭೀಮಶಕ್ತಿ)ಯ ಮುಖಂಡ ಮುರುಳಿ‌ ಮಾತನಾಡಿ, ಪೂಜನಹಳ್ಳಿ ಗ್ರಾಮದ ದೊಡ್ಡಮುನಿಯಪ್ಪನವರ ಮಗನಾದ ಗೋವಿಂದಪ್ಪ ಅವರು 1965 ರಿಂದಲೂ ಅಂಗನವಾಡಿ ನಡೆಸುತ್ತಿದ್ದ ಜಾಗಕ್ಕೆ ಕಂದಾಯ ಕಟ್ಟಿಕೊಂಡು ಬಂದಿದ್ದಾರೆ. ಈ ಸ್ವತ್ತಿನ ವಿಚಾರದಲ್ಲಿ ನ್ಯಾಯಾಲಯ ಕೂಡ ಗೋವಿಂದಪ್ಪ ಪರ ಆದೇಶ ನೀಡಿದೆ. ಇಷ್ಟಾದರೂ ಹಣದಾಸೆಗೆ ಸುಖಾಸುಮ್ಮನೆ ಪಂಚಾಯ್ತಿ ಹಾಗೂ ಅಧಿಕಾರಿಗಳಿಗೆ ಕೆಟ್ಟ ಹೆಸರು ತರಲು ಸೋಮಶೇಖರ್ ಪ್ರಯತ್ನಿಸುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಒತ್ತಡಕ್ಕೆ ಮಣಿದು ಯಾವುದೇ ಕ್ರಮ ಜರುಗಿಸಬಾರದು.‌ ಒಂದು ವೇಳೆ ಪಿಡಿಒ ವಿರುದ್ದ ಕ್ರಮ ಕೈಗೊಂಡರೆ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಗೋವಿಂದಪ್ಪ ಅವರು ಅಂಗನವಾಡಿಗಾಗಿ ತಮ್ಮ ಒಟ್ಟು‌ 75*120 ಅಳತೆಯ ನಿವೇಶನದಲ್ಲಿ 22*23 ಜಾಗವನ್ನು ದಾನ ನೀಡಿದ್ದಾರೆ. ಉಳಿದ ಜಾಗಕ್ಕೆ ಖಾತೆ ಮಾಡಿಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಬೇಕಿದ್ದರೆ ಹಿರಿಯ ಅಧಿಕಾರಿಗಳೇ ಸ್ಥಳ, ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿ ಎಂದರು.

ಪಿತ್ರಾರ್ಜಿತ ಸ್ವತ್ತಿಗೆ ಖಾತೆ ಮಾಡಿಕೊಡಬಾರದು‌ ಎಂದು ಹೇಳಿ ಧರಣಿ ನಡೆಸಲು ಸೋಮಶೇಖರ್ ಯಾರು?, ಆತ ದೊಡ್ಡಪನಹಳ್ಳಿ ಸದಸ್ಯ, ಹೀಗಿರುವಾಗ ಪೂಜನಹಳ್ಳಿ ಖಾಸಗಿ ಸ್ವತ್ತಿನ ವಿಚಾರದಲ್ಲಿ ಮೂಗು ತೂರಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.

ಸ್ವತ್ತಿನ ಮಾಲೀಕ ಗೋವಿಂದಪ್ಪ ಮಾತನಾಡಿ, ನಿವೇಶನದ ವಿಸ್ತೀರ್ಣದಲ್ಲಿ ಏರುಪೇರು ಬಂದ ಕಾರಣ ತಿದ್ದುಪಡಿ ಮಾಡಿಸಬೇಕಿತ್ತು. ಆಗ ಸೋಮಶೇಖರ್ ಅವರು ಖುದ್ದು ಬಂದು ತಿದ್ದುಪಡಿ ಮಾಡಿಸಿಕೊಡುತ್ತೇನೆ 5 ಲಕ್ಷ ರೂ. ಕೊಡಿ ಎಂದು ಕೇಳಿದರು. ನಾನು‌ ಕೊಡಲು ಒಪ್ಪದಿದ್ದಾಗ ಚಂದ್ರೇಗೌಡ ಅವರದ್ದು ಜಾಗ ಎಂದೇಳಿ ಗಲಾಟೆ ಮಾಡಿದರು. ನಾನು‌ ನ್ಯಾಯಾಲಯದ ಮೊರೆ ಹೋದೆ.‌ ಘನ‌ ನ್ಯಾಯಾಲಯ ನಮ್ಮಂತೆ ಆದೇಶ ನೀಡಿದೆ. ಇಷ್ಟಾದರೂ ದುರುದ್ದೇಶಪೂರ್ವಕವಾಗಿ ಹಿರಿಯ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಧರಣಿ ಕುಳಿತಿದ್ದಾರೆ ಎಂದು ಆರೋಪಿಸಿದರು.

ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

ಕನ್ನಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ 12 ಗ್ರಾಮಗಳ ಒಟ್ಟು 26 ಸದಸ್ಯರಲ್ಲಿ ಸೋಮಶೇಖರ್ ಅವರು ದೊಡ್ಡಪ್ಪನಹಳ್ಳಿ ಗ್ರಾಮದಿಂದ ಆಯ್ಕೆಯಾಗಿದ್ದಾರೆ. ಅವರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗಿಂತ ವೈಯಕ್ತಿಕ ಪ್ರತಿಷ್ಠೆಯೇ ಹೆಚ್ಚು.

ಗ್ರಾ.ಪಂ.ಸಾಮಾನ್ಯ ಸಭೆಯಲ್ಲಿ ಬಗೆಹರಿಸಬಹುದಾದ ಸಣ್ಣಪುಟ್ಟ ಸಮಸ್ಯೆಗಳನ್ನು ಮೇಲಧಿಕಾರಿಗಳು ಹಾಗೂ ಸಾಮಾನ್ಯ ಸಭೆಯ ಗಮನಕ್ಕೆ ತರದೇ ಮಾಧ್ಯಮಗಳ‌ ಮುಂದೆ ಹೋಗಿ ಪಂಚಾಯ್ತಿಗೆ ಕೆಟ್ಟ ಹೆಸರು ತರುತ್ತಿದ್ದಾರೆ.

ಪ್ರತಿ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ಮತ್ತು ಮೂಲಸೌಕರ್ಯಕ್ಕೆ ಸಂಬಂಧಿಸಿ ಬಹುತೇಕರು ತೆಗೆದುಕೊಳ್ಳುವ ಸರ್ವಾನುಮತದ ನಿರ್ಣಯಗಳನ್ನು ಯಾವಾಗಲೂ ವಿರೋಧಿಸುತ್ತಾರೆ. ಗ್ರಾಮ ಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿಗೆ ಅಡ್ಡಗಾಲು ಹಾಕುವ ಮೂಲಕ ದುರ್ವರ್ತನೆ ತೋರುವ ಸ್ವಭಾವವನ್ನು ಹೊಂದಿದ್ದಾರೆ ಎಂದು ಉಳಿದ 25 ಗ್ರಾಮ ಪಂಚಾಯ್ತಿ ಸದಸ್ಯರು ಆರೋಪಿಸಿದ್ದಾರೆ.

ಸೋಮಶೇಖರ್ ಅವರ ಸುಳ್ಳು ಆರೋಪ, ಒತ್ತಡ ತಂತ್ರದಿಂದ ಕನ್ನಮಂಗಲ ಗ್ರಾಮ ಪಂಚಾಯಿತಿಯ ಪ್ರಾಮಾಣಿಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ತೊಂದರೆಯಾದರೆ ಕನ್ನಮಂಗಲ ಗ್ರಾ.ಪಂ.ಸದಸ್ಯರಾದ ನಾವೆಲ್ಲರೂ ನಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಉಗ್ರ ಹೋರಾಟಕ್ಕೆ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

8 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

10 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

14 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago