ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಿಎಂ ಸಭೆ- ಸಭೆ ಮುಖ್ಯಾಂಶುಗಳು ಇಲ್ಲಿವೆ ಓದಿ….

ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು

• ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ. ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್‌ಪಿ ನಿಗದಿಪಡಿಸಿದೆ. ಈ ಎಫ್ಆರ್‌ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್‌ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ.

• ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್‌ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು.

* ಕೇಂದ್ರ ಸರ್ಕಾರ ಎಫ್‌ಆರ್‌ಪಿ ದರಕ್ಕೆ ಪೂರಕವಾಗಿ ಎಂಎಸ್‌ಪಿ ದರ ಏರಿಸುತ್ತಿಲ್ಲ. 2019 ರಿಂದ ಕೇಂದ್ರ ಎಂಎಸ್‌ಪಿ ದರ ಏರಿಸಿಲ್ಲ. ಎಥೆನಾಲ್ ದರವನ್ನೂ ಏರಿಸಿಲ್ಲ. ನಮ್ಮ ಈ ಸಮಸ್ಯೆ ಬಗ್ಗೆಯೂ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಬೇಕು ಎಂದು ಕಾರ್ಖಾನೆ ಮಾಲೀಕರು ಒತ್ತಾಯಿಸಿದ್ದಾರೆ. ಎಂಎಸ್‌ಪಿ ದರ ಹೆಚ್ಚಿಸುವಂತೆ ಬಹಳ ಹಿಂದೆಯೇ ಕೇಂದ್ರಕ್ಕೆ, ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರ ಎಂಎಸ್‌ಪಿ ದರ ಹೆಚ್ಚಿಸಿಲ್ಲ. ರಾಜ್ಯ ಪ್ರತಿ‌ನಿಧಿಸುವ ಕೇಂದ್ರ ಮಂತ್ರಿಗಳೂ ಕಬ್ಬು ಬೆಳೆಗಾರರಿಗೆ ಎಂಎಸ್‌ಪಿ ದರ ಹೆಚ್ಚಿಸುವುದಕ್ಕೆ ಸಹಕರಿಸಲಿಲ್ಲ, ಪ್ರಧಾನಿ ಅವರ ಜೊತೆ ಮಾತಾಡುತ್ತಿಲ್ಲ.

• ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಪ್ರಸ್ತುತ ಕಬ್ಬು ಬೆಳೆಗಾರರು ಬೀದಿಗಿಳಿದಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ರೂ.3,200 ರೂ. ನಿಗದಿಪಡಿಸಿದ್ದು, (ಕಟಾವು ಮತ್ತು ಸಾಗಾಟ ಹೊರತುಪಡಿಸಿ) ಇದಕ್ಕೆ ಕಾರ್ಖಾನೆಗಳು ಒಪ್ಪಿಕೊಂಡರೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬಹುದಾಗಿದೆ. ಆಯಾ ಪ್ರದೇಶದ ಇಳುವರಿ ರಿಕವರಿ ಪ್ರಮಾಣದ ಆಧಾರದಲ್ಲಿ ದರವನ್ನು ಹೆಚ್ಚಳ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ.

• ಸಹಕಾರಿ ರಂಗದ ಇಐಡಿ ಪ್ಯಾರಿ ಶುಗರ್ ಕಾರ್ಖಾನೆಯವರು ಕಬ್ಬು ಬೆಳೆಗಾರರಿಗೆ ಪ್ರಸ್ತುತ ರೂ.3,211ಪಾವತಿಸುತ್ತಿದೆ. ಇದೇ ಮಾದರಿಯಲ್ಲಿ ಉಳಿದ ಕಾರ್ಖಾನೆಗಳು ರೈತರಿಗೆ ಪಾವತಿಸಿದರೆ ಅನುಕೂಲ‌ ಆಗಲಿದೆ.

• ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳನ್ನು ಆಲಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿಯೇ, ಸಕ್ಕರೆಯ ಎಂಎಸ್‌ಪಿ ರೂ.41ಕ್ಕೆ ನಿಗದಿಪಡಿಸಲು ಕೋರಿ ಪ್ರಧಾನಿಯವರಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ಅವರು ಸಮಯ ನೀಡಿದರೆ ನಾಳೆಯೇ ನಿಯೋಗ ಕರೆದುಕೊಂಡು ಹೋಗಲು ಸಿದ್ಧರಿದ್ದೇವೆ.

• ಅವಧಿಗಿಂತ ಮೊದಲು ಕಬ್ಬು ಕಟಾವು ಮಾಡದಿರುವುದು ಸೇರಿದಂತೆ ಕಬ್ಬಿನ ಇಳವರಿ ರಿಕವರಿ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುವ ಕುರಿತು ರೈತರಿಗೆ ಜಾಗೃತಿ ಮೂಡಿಸುವುದು ಸಕ್ಕರೆ ಕಾರ್ಖಾನೆಗಳ ಜವಾಬ್ದಾರಿಯಾಗಿದೆ.

Ramesh Babu

Journalist

Recent Posts

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

1 hour ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

3 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

4 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

10 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

11 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

22 hours ago