ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್ ಕಂಪನಿಯ ಘಟಕದ ಮುಖ್ಯಸ್ಥ ನವೀದ್ ಹೇಳಿದರು.

ತಾಲೂಕಿನ ಕಮಲೂರು ಕೆರೆಯನ್ನು ಫಾಕ್ಸ್ಕಾನ್ ಕಂಪನಿಯ ಸಿಎಸ್‌ಆರ್ ಅನುದಾನದಲ್ಲಿ ಪುನಶ್ಚೇತನಗೊಳಿಸಿ, ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆರೆಯ ಅಭಿವೃದ್ಧಿಗೆ ಅವಕಾಶ ದೊರೆತಿರುವುದು ಸಂತಸದ ಸಂಗತಿ. ಕೆರೆಗಳ ಅಭಿವೃದ್ಧಿಯಿಂದ ನೀರಿನ ಸಂಗ್ರಹಣೆ ಹೆಚ್ಚುವುದರ ಜೊತೆಗೆ ಅಂತರ್ಜಲ ಮಟ್ಟವೂ ಏರಿಕೆಯಾಗುತ್ತದೆ. ಜೀವ ವೈವಿಧ್ಯತೆ ಸಂರಕ್ಷಣೆ, ಮಳೆನೀರು ಸಂಗ್ರಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಕೆರೆಗಳು ಮಹತ್ವದ ಪಾತ್ರವಹಿಸುತ್ತವೆ. ಕೈಗಾರಿಕಾ ಅಭಿವೃದ್ಧಿಯ ಜೊತೆಗೆ ಗ್ರಾಮಗಳ ಅಭಿವೃದ್ಧಿಗೂ ಫಾಕ್ಸ್ಕಾನ್ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.

ತಿಪ್ಪೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಮಾತನಾಡಿ, ಬಯಲುಸೀಮೆ ಪ್ರದೇಶಗಳಲ್ಲಿ ಕೆರೆಗಳ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ಫಾಕ್ಸ್ಕಾನ್ ಕಂಪನಿಯ ಸಿಎಸ್‌ಆರ್ ಅನುದಾನದಲ್ಲಿ ಕಮಲೂರು ಕೆರೆಗೆ ಹೊಸ ರೂಪ ಸಿಕ್ಕಿದ್ದು, ಹೂಳೆತ್ತುವಿಕೆ, ಕೆರೆ ಕಟ್ಟೆ ಅಭಿವೃದ್ಧಿ, ಕೆರೆ ಬದಿಗಳಲ್ಲಿ ಸಸಿ ನೆಡುವುದು ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇಂತಹ ಯೋಜನೆಗಳು ಇನ್ನಷ್ಟು ಕೆರೆಗಳಿಗೆ ವಿಸ್ತರಿಸಿದರೆ ಗ್ರಾಮಗಳ ನೀರಿನ ಸಮಸ್ಯೆ ನಿವಾರಣೆಗೆ ನೆರವಾಗಲಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಕಮಲೂರು ಕೆರೆ ಬದಿಗಳಲ್ಲಿ ಹಣ್ಣಿನ ಸಸಿಗಳನ್ನು ನೆಡಲಾಯಿತು. ಬಳಿಕ ಫಾಕ್ಸ್ಕಾನ್ ಕಂಪನಿಯ ಅಧಿಕಾರಿಗಳು ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಫಾಕ್ಸ್ಕಾನ್ ಕಂಪನಿಯ ವ್ಯವಸ್ಥಾಪಕ ಸುಬ್ರಮಣಿ, ಅಧಿಕಾರಿಗಳಾದ ಪರ್ಲ್, ಆ್ಯಂಡ್ರಿವ್, ಕೃಷ್ಣ ಪ್ರಸಾದ್, ಶಿವಣ್ಣ ಹಾಗೂ ಮುಖಂಡರಾದ ಪ್ರಸಾದ್, ಮಹೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

7 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

9 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

15 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

16 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago