ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್ ಕಂಪನಿಯ ಘಟಕದ ಮುಖ್ಯಸ್ಥ ನವೀದ್ ಹೇಳಿದರು.

ತಾಲೂಕಿನ ಕಮಲೂರು ಕೆರೆಯನ್ನು ಫಾಕ್ಸ್ಕಾನ್ ಕಂಪನಿಯ ಸಿಎಸ್‌ಆರ್ ಅನುದಾನದಲ್ಲಿ ಪುನಶ್ಚೇತನಗೊಳಿಸಿ, ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆರೆಯ ಅಭಿವೃದ್ಧಿಗೆ ಅವಕಾಶ ದೊರೆತಿರುವುದು ಸಂತಸದ ಸಂಗತಿ. ಕೆರೆಗಳ ಅಭಿವೃದ್ಧಿಯಿಂದ ನೀರಿನ ಸಂಗ್ರಹಣೆ ಹೆಚ್ಚುವುದರ ಜೊತೆಗೆ ಅಂತರ್ಜಲ ಮಟ್ಟವೂ ಏರಿಕೆಯಾಗುತ್ತದೆ. ಜೀವ ವೈವಿಧ್ಯತೆ ಸಂರಕ್ಷಣೆ, ಮಳೆನೀರು ಸಂಗ್ರಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಕೆರೆಗಳು ಮಹತ್ವದ ಪಾತ್ರವಹಿಸುತ್ತವೆ. ಕೈಗಾರಿಕಾ ಅಭಿವೃದ್ಧಿಯ ಜೊತೆಗೆ ಗ್ರಾಮಗಳ ಅಭಿವೃದ್ಧಿಗೂ ಫಾಕ್ಸ್ಕಾನ್ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.

ತಿಪ್ಪೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಮಾತನಾಡಿ, ಬಯಲುಸೀಮೆ ಪ್ರದೇಶಗಳಲ್ಲಿ ಕೆರೆಗಳ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ಫಾಕ್ಸ್ಕಾನ್ ಕಂಪನಿಯ ಸಿಎಸ್‌ಆರ್ ಅನುದಾನದಲ್ಲಿ ಕಮಲೂರು ಕೆರೆಗೆ ಹೊಸ ರೂಪ ಸಿಕ್ಕಿದ್ದು, ಹೂಳೆತ್ತುವಿಕೆ, ಕೆರೆ ಕಟ್ಟೆ ಅಭಿವೃದ್ಧಿ, ಕೆರೆ ಬದಿಗಳಲ್ಲಿ ಸಸಿ ನೆಡುವುದು ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇಂತಹ ಯೋಜನೆಗಳು ಇನ್ನಷ್ಟು ಕೆರೆಗಳಿಗೆ ವಿಸ್ತರಿಸಿದರೆ ಗ್ರಾಮಗಳ ನೀರಿನ ಸಮಸ್ಯೆ ನಿವಾರಣೆಗೆ ನೆರವಾಗಲಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಕಮಲೂರು ಕೆರೆ ಬದಿಗಳಲ್ಲಿ ಹಣ್ಣಿನ ಸಸಿಗಳನ್ನು ನೆಡಲಾಯಿತು. ಬಳಿಕ ಫಾಕ್ಸ್ಕಾನ್ ಕಂಪನಿಯ ಅಧಿಕಾರಿಗಳು ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಫಾಕ್ಸ್ಕಾನ್ ಕಂಪನಿಯ ವ್ಯವಸ್ಥಾಪಕ ಸುಬ್ರಮಣಿ, ಅಧಿಕಾರಿಗಳಾದ ಪರ್ಲ್, ಆ್ಯಂಡ್ರಿವ್, ಕೃಷ್ಣ ಪ್ರಸಾದ್, ಶಿವಣ್ಣ ಹಾಗೂ ಮುಖಂಡರಾದ ಪ್ರಸಾದ್, ಮಹೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

4 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

15 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

17 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

17 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

2 days ago