ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್ ಕಂಪನಿಯ ಘಟಕದ ಮುಖ್ಯಸ್ಥ ನವೀದ್ ಹೇಳಿದರು.
ತಾಲೂಕಿನ ಕಮಲೂರು ಕೆರೆಯನ್ನು ಫಾಕ್ಸ್ಕಾನ್ ಕಂಪನಿಯ ಸಿಎಸ್ಆರ್ ಅನುದಾನದಲ್ಲಿ ಪುನಶ್ಚೇತನಗೊಳಿಸಿ, ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೆರೆಯ ಅಭಿವೃದ್ಧಿಗೆ ಅವಕಾಶ ದೊರೆತಿರುವುದು ಸಂತಸದ ಸಂಗತಿ. ಕೆರೆಗಳ ಅಭಿವೃದ್ಧಿಯಿಂದ ನೀರಿನ ಸಂಗ್ರಹಣೆ ಹೆಚ್ಚುವುದರ ಜೊತೆಗೆ ಅಂತರ್ಜಲ ಮಟ್ಟವೂ ಏರಿಕೆಯಾಗುತ್ತದೆ. ಜೀವ ವೈವಿಧ್ಯತೆ ಸಂರಕ್ಷಣೆ, ಮಳೆನೀರು ಸಂಗ್ರಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಕೆರೆಗಳು ಮಹತ್ವದ ಪಾತ್ರವಹಿಸುತ್ತವೆ. ಕೈಗಾರಿಕಾ ಅಭಿವೃದ್ಧಿಯ ಜೊತೆಗೆ ಗ್ರಾಮಗಳ ಅಭಿವೃದ್ಧಿಗೂ ಫಾಕ್ಸ್ಕಾನ್ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.
ತಿಪ್ಪೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಮಾತನಾಡಿ, ಬಯಲುಸೀಮೆ ಪ್ರದೇಶಗಳಲ್ಲಿ ಕೆರೆಗಳ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ಫಾಕ್ಸ್ಕಾನ್ ಕಂಪನಿಯ ಸಿಎಸ್ಆರ್ ಅನುದಾನದಲ್ಲಿ ಕಮಲೂರು ಕೆರೆಗೆ ಹೊಸ ರೂಪ ಸಿಕ್ಕಿದ್ದು, ಹೂಳೆತ್ತುವಿಕೆ, ಕೆರೆ ಕಟ್ಟೆ ಅಭಿವೃದ್ಧಿ, ಕೆರೆ ಬದಿಗಳಲ್ಲಿ ಸಸಿ ನೆಡುವುದು ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇಂತಹ ಯೋಜನೆಗಳು ಇನ್ನಷ್ಟು ಕೆರೆಗಳಿಗೆ ವಿಸ್ತರಿಸಿದರೆ ಗ್ರಾಮಗಳ ನೀರಿನ ಸಮಸ್ಯೆ ನಿವಾರಣೆಗೆ ನೆರವಾಗಲಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ ಕಮಲೂರು ಕೆರೆ ಬದಿಗಳಲ್ಲಿ ಹಣ್ಣಿನ ಸಸಿಗಳನ್ನು ನೆಡಲಾಯಿತು. ಬಳಿಕ ಫಾಕ್ಸ್ಕಾನ್ ಕಂಪನಿಯ ಅಧಿಕಾರಿಗಳು ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಫಾಕ್ಸ್ಕಾನ್ ಕಂಪನಿಯ ವ್ಯವಸ್ಥಾಪಕ ಸುಬ್ರಮಣಿ, ಅಧಿಕಾರಿಗಳಾದ ಪರ್ಲ್, ಆ್ಯಂಡ್ರಿವ್, ಕೃಷ್ಣ ಪ್ರಸಾದ್, ಶಿವಣ್ಣ ಹಾಗೂ ಮುಖಂಡರಾದ ಪ್ರಸಾದ್, ಮಹೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…