ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್ ಕಂಪನಿಯ ಘಟಕದ ಮುಖ್ಯಸ್ಥ ನವೀದ್ ಹೇಳಿದರು.

ತಾಲೂಕಿನ ಕಮಲೂರು ಕೆರೆಯನ್ನು ಫಾಕ್ಸ್ಕಾನ್ ಕಂಪನಿಯ ಸಿಎಸ್‌ಆರ್ ಅನುದಾನದಲ್ಲಿ ಪುನಶ್ಚೇತನಗೊಳಿಸಿ, ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆರೆಯ ಅಭಿವೃದ್ಧಿಗೆ ಅವಕಾಶ ದೊರೆತಿರುವುದು ಸಂತಸದ ಸಂಗತಿ. ಕೆರೆಗಳ ಅಭಿವೃದ್ಧಿಯಿಂದ ನೀರಿನ ಸಂಗ್ರಹಣೆ ಹೆಚ್ಚುವುದರ ಜೊತೆಗೆ ಅಂತರ್ಜಲ ಮಟ್ಟವೂ ಏರಿಕೆಯಾಗುತ್ತದೆ. ಜೀವ ವೈವಿಧ್ಯತೆ ಸಂರಕ್ಷಣೆ, ಮಳೆನೀರು ಸಂಗ್ರಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಕೆರೆಗಳು ಮಹತ್ವದ ಪಾತ್ರವಹಿಸುತ್ತವೆ. ಕೈಗಾರಿಕಾ ಅಭಿವೃದ್ಧಿಯ ಜೊತೆಗೆ ಗ್ರಾಮಗಳ ಅಭಿವೃದ್ಧಿಗೂ ಫಾಕ್ಸ್ಕಾನ್ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.

ತಿಪ್ಪೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಮಾತನಾಡಿ, ಬಯಲುಸೀಮೆ ಪ್ರದೇಶಗಳಲ್ಲಿ ಕೆರೆಗಳ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ಫಾಕ್ಸ್ಕಾನ್ ಕಂಪನಿಯ ಸಿಎಸ್‌ಆರ್ ಅನುದಾನದಲ್ಲಿ ಕಮಲೂರು ಕೆರೆಗೆ ಹೊಸ ರೂಪ ಸಿಕ್ಕಿದ್ದು, ಹೂಳೆತ್ತುವಿಕೆ, ಕೆರೆ ಕಟ್ಟೆ ಅಭಿವೃದ್ಧಿ, ಕೆರೆ ಬದಿಗಳಲ್ಲಿ ಸಸಿ ನೆಡುವುದು ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇಂತಹ ಯೋಜನೆಗಳು ಇನ್ನಷ್ಟು ಕೆರೆಗಳಿಗೆ ವಿಸ್ತರಿಸಿದರೆ ಗ್ರಾಮಗಳ ನೀರಿನ ಸಮಸ್ಯೆ ನಿವಾರಣೆಗೆ ನೆರವಾಗಲಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಕಮಲೂರು ಕೆರೆ ಬದಿಗಳಲ್ಲಿ ಹಣ್ಣಿನ ಸಸಿಗಳನ್ನು ನೆಡಲಾಯಿತು. ಬಳಿಕ ಫಾಕ್ಸ್ಕಾನ್ ಕಂಪನಿಯ ಅಧಿಕಾರಿಗಳು ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಫಾಕ್ಸ್ಕಾನ್ ಕಂಪನಿಯ ವ್ಯವಸ್ಥಾಪಕ ಸುಬ್ರಮಣಿ, ಅಧಿಕಾರಿಗಳಾದ ಪರ್ಲ್, ಆ್ಯಂಡ್ರಿವ್, ಕೃಷ್ಣ ಪ್ರಸಾದ್, ಶಿವಣ್ಣ ಹಾಗೂ ಮುಖಂಡರಾದ ಪ್ರಸಾದ್, ಮಹೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago