ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್ ಕಂಪನಿಯ ಘಟಕದ ಮುಖ್ಯಸ್ಥ ನವೀದ್ ಹೇಳಿದರು.
ತಾಲೂಕಿನ ಕಮಲೂರು ಕೆರೆಯನ್ನು ಫಾಕ್ಸ್ಕಾನ್ ಕಂಪನಿಯ ಸಿಎಸ್ಆರ್ ಅನುದಾನದಲ್ಲಿ ಪುನಶ್ಚೇತನಗೊಳಿಸಿ, ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೆರೆಯ ಅಭಿವೃದ್ಧಿಗೆ ಅವಕಾಶ ದೊರೆತಿರುವುದು ಸಂತಸದ ಸಂಗತಿ. ಕೆರೆಗಳ ಅಭಿವೃದ್ಧಿಯಿಂದ ನೀರಿನ ಸಂಗ್ರಹಣೆ ಹೆಚ್ಚುವುದರ ಜೊತೆಗೆ ಅಂತರ್ಜಲ ಮಟ್ಟವೂ ಏರಿಕೆಯಾಗುತ್ತದೆ. ಜೀವ ವೈವಿಧ್ಯತೆ ಸಂರಕ್ಷಣೆ, ಮಳೆನೀರು ಸಂಗ್ರಹಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಕೆರೆಗಳು ಮಹತ್ವದ ಪಾತ್ರವಹಿಸುತ್ತವೆ. ಕೈಗಾರಿಕಾ ಅಭಿವೃದ್ಧಿಯ ಜೊತೆಗೆ ಗ್ರಾಮಗಳ ಅಭಿವೃದ್ಧಿಗೂ ಫಾಕ್ಸ್ಕಾನ್ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.
ತಿಪ್ಪೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಮಾತನಾಡಿ, ಬಯಲುಸೀಮೆ ಪ್ರದೇಶಗಳಲ್ಲಿ ಕೆರೆಗಳ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ಫಾಕ್ಸ್ಕಾನ್ ಕಂಪನಿಯ ಸಿಎಸ್ಆರ್ ಅನುದಾನದಲ್ಲಿ ಕಮಲೂರು ಕೆರೆಗೆ ಹೊಸ ರೂಪ ಸಿಕ್ಕಿದ್ದು, ಹೂಳೆತ್ತುವಿಕೆ, ಕೆರೆ ಕಟ್ಟೆ ಅಭಿವೃದ್ಧಿ, ಕೆರೆ ಬದಿಗಳಲ್ಲಿ ಸಸಿ ನೆಡುವುದು ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇಂತಹ ಯೋಜನೆಗಳು ಇನ್ನಷ್ಟು ಕೆರೆಗಳಿಗೆ ವಿಸ್ತರಿಸಿದರೆ ಗ್ರಾಮಗಳ ನೀರಿನ ಸಮಸ್ಯೆ ನಿವಾರಣೆಗೆ ನೆರವಾಗಲಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ ಕಮಲೂರು ಕೆರೆ ಬದಿಗಳಲ್ಲಿ ಹಣ್ಣಿನ ಸಸಿಗಳನ್ನು ನೆಡಲಾಯಿತು. ಬಳಿಕ ಫಾಕ್ಸ್ಕಾನ್ ಕಂಪನಿಯ ಅಧಿಕಾರಿಗಳು ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಫಾಕ್ಸ್ಕಾನ್ ಕಂಪನಿಯ ವ್ಯವಸ್ಥಾಪಕ ಸುಬ್ರಮಣಿ, ಅಧಿಕಾರಿಗಳಾದ ಪರ್ಲ್, ಆ್ಯಂಡ್ರಿವ್, ಕೃಷ್ಣ ಪ್ರಸಾದ್, ಶಿವಣ್ಣ ಹಾಗೂ ಮುಖಂಡರಾದ ಪ್ರಸಾದ್, ಮಹೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…