ಕಮಲ ಕೆಸರಿನಲ್ಲಿ ಇದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಈ “ಕೈ” ಅಧಿಕಾರದಲ್ಲಿದ್ದರೆ ಚೆಂದ- ಡಿಸಿಎಂ ಡಿಕೆಶಿ

ನಮ್ಮದು ಬಲಿಷ್ಠವಾದ ಸರ್ಕಾರ. ನಿಮ್ಮ ಋಣವನ್ನು ತೀರಿಸುವ ಕೆಲಸ ಮಾಡಲು ಯತ್ನಸುತ್ತೇವೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತನ್ನು ಈಡೇರಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಶೇ.90ರಷ್ಟು ಜನರಿಗೆ ಮನೆಗೆ ದೀಪ‌, ಹಸಿದವರಿಗೆ ಅಕ್ಕಿ, ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಕ್ತಿ ಯೋಜನೆ ಸೇರಿದಂತೆ ಐದು ಗ್ಯಾರೆಂಟಿ ಯೋಜನೆಗಳನ್ನು ತಂದು ಯಶಸ್ವಿಯಾಗಿದ್ದೇವೆ.

ವಿರೋಧ ಪಕ್ಷದವರು ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಯಾರಿಗಾಗಿ, ಯಾತಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದರೆ ಎಂಬುದು ಗೊತ್ತಿಲ್ಲ. ರೈತರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಆಕ್ರೋಶವಂತೆ ಆಕ್ರೋಶ ಯಾರ ಮೇಲೆ ಆಕ್ರೋಶ, ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿ ಎಂದು ಬಿಜೆಪಿ ವಿರುದ್ಧ ಹರಿಹಾದ್ದರು.

ಜನಸೇವೆಯಲ್ಲಿ ಪ್ರಾಮಾಣಿಕತೆ ಇರಲಿ. ಕಾಂಗ್ರೆಸ್ ಅಧಿಕಾರ ಬಂದಕೂಡಲೇ ಎಲ್ಲರಿಗೂ ಅಧಿಕಾರ ಕೊಡುತ್ತೇವೆ. ಉಚಿತ ಶಿಕ್ಷಣ, ಪೋಡಿ ಮುಕ್ತ ಗ್ರಾಮ, ಉಚಿತ ಪಹಣಿ‌ ಕೊಡುವುದು ಸೇರಿದಂತೆ ಇನ್ನಿತರೆ ಜನ‌ಸ್ನೇಹಿ ಕಾರ್ಯಕ್ರಮಗಳನ್ನು ತಂದಿದ್ದೇವೆ. ಇಂತಹದ್ದೊಂದು ಯೋಜನೆ, ಸೌಲಭ್ಯ ಬಿಜೆಪಿ ಸರ್ಕಾರವಿದ್ದಾಗ ತಂದಿದೆಯೇ..? ಎಂದು ಪ್ರಶ್ನೆ ಮಾಡಿದರು.

ಬಿಜೆಪಿ,‌ ಜೆಡಿಎಸ್ ನವರೇ ಬಡವರು, ರೈತರಿಗೆ, ಮಹಿಳೆಯರಿಗೆ, ನಿರುದ್ಯೋಗಸ್ಥರಿಗೆ ಏನು‌ ಮಾಡಿದ್ದೀರಿ…? ಕಮಲ ಕೆಸರಿನಲ್ಲಿ ಇದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಈ “ಕೈ” ಅಧಿಕಾರದಲ್ಲಿದ್ದರೆ ಚೆಂದ ಎಂದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

24 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago