ನಮ್ಮದು ಬಲಿಷ್ಠವಾದ ಸರ್ಕಾರ. ನಿಮ್ಮ ಋಣವನ್ನು ತೀರಿಸುವ ಕೆಲಸ ಮಾಡಲು ಯತ್ನಸುತ್ತೇವೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತನ್ನು ಈಡೇರಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಶೇ.90ರಷ್ಟು ಜನರಿಗೆ ಮನೆಗೆ ದೀಪ, ಹಸಿದವರಿಗೆ ಅಕ್ಕಿ, ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಕ್ತಿ ಯೋಜನೆ ಸೇರಿದಂತೆ ಐದು ಗ್ಯಾರೆಂಟಿ ಯೋಜನೆಗಳನ್ನು ತಂದು ಯಶಸ್ವಿಯಾಗಿದ್ದೇವೆ.
ವಿರೋಧ ಪಕ್ಷದವರು ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಯಾರಿಗಾಗಿ, ಯಾತಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದರೆ ಎಂಬುದು ಗೊತ್ತಿಲ್ಲ. ರೈತರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಆಕ್ರೋಶವಂತೆ ಆಕ್ರೋಶ ಯಾರ ಮೇಲೆ ಆಕ್ರೋಶ, ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿ ಎಂದು ಬಿಜೆಪಿ ವಿರುದ್ಧ ಹರಿಹಾದ್ದರು.
ಜನಸೇವೆಯಲ್ಲಿ ಪ್ರಾಮಾಣಿಕತೆ ಇರಲಿ. ಕಾಂಗ್ರೆಸ್ ಅಧಿಕಾರ ಬಂದಕೂಡಲೇ ಎಲ್ಲರಿಗೂ ಅಧಿಕಾರ ಕೊಡುತ್ತೇವೆ. ಉಚಿತ ಶಿಕ್ಷಣ, ಪೋಡಿ ಮುಕ್ತ ಗ್ರಾಮ, ಉಚಿತ ಪಹಣಿ ಕೊಡುವುದು ಸೇರಿದಂತೆ ಇನ್ನಿತರೆ ಜನಸ್ನೇಹಿ ಕಾರ್ಯಕ್ರಮಗಳನ್ನು ತಂದಿದ್ದೇವೆ. ಇಂತಹದ್ದೊಂದು ಯೋಜನೆ, ಸೌಲಭ್ಯ ಬಿಜೆಪಿ ಸರ್ಕಾರವಿದ್ದಾಗ ತಂದಿದೆಯೇ..? ಎಂದು ಪ್ರಶ್ನೆ ಮಾಡಿದರು.
ಬಿಜೆಪಿ, ಜೆಡಿಎಸ್ ನವರೇ ಬಡವರು, ರೈತರಿಗೆ, ಮಹಿಳೆಯರಿಗೆ, ನಿರುದ್ಯೋಗಸ್ಥರಿಗೆ ಏನು ಮಾಡಿದ್ದೀರಿ…? ಕಮಲ ಕೆಸರಿನಲ್ಲಿ ಇದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಈ “ಕೈ” ಅಧಿಕಾರದಲ್ಲಿದ್ದರೆ ಚೆಂದ ಎಂದರು.
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…