ನಮ್ಮದು ಬಲಿಷ್ಠವಾದ ಸರ್ಕಾರ. ನಿಮ್ಮ ಋಣವನ್ನು ತೀರಿಸುವ ಕೆಲಸ ಮಾಡಲು ಯತ್ನಸುತ್ತೇವೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತನ್ನು ಈಡೇರಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಶೇ.90ರಷ್ಟು ಜನರಿಗೆ ಮನೆಗೆ ದೀಪ, ಹಸಿದವರಿಗೆ ಅಕ್ಕಿ, ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಕ್ತಿ ಯೋಜನೆ ಸೇರಿದಂತೆ ಐದು ಗ್ಯಾರೆಂಟಿ ಯೋಜನೆಗಳನ್ನು ತಂದು ಯಶಸ್ವಿಯಾಗಿದ್ದೇವೆ.
ವಿರೋಧ ಪಕ್ಷದವರು ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಯಾರಿಗಾಗಿ, ಯಾತಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದರೆ ಎಂಬುದು ಗೊತ್ತಿಲ್ಲ. ರೈತರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಆಕ್ರೋಶವಂತೆ ಆಕ್ರೋಶ ಯಾರ ಮೇಲೆ ಆಕ್ರೋಶ, ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿ ಎಂದು ಬಿಜೆಪಿ ವಿರುದ್ಧ ಹರಿಹಾದ್ದರು.
ಜನಸೇವೆಯಲ್ಲಿ ಪ್ರಾಮಾಣಿಕತೆ ಇರಲಿ. ಕಾಂಗ್ರೆಸ್ ಅಧಿಕಾರ ಬಂದಕೂಡಲೇ ಎಲ್ಲರಿಗೂ ಅಧಿಕಾರ ಕೊಡುತ್ತೇವೆ. ಉಚಿತ ಶಿಕ್ಷಣ, ಪೋಡಿ ಮುಕ್ತ ಗ್ರಾಮ, ಉಚಿತ ಪಹಣಿ ಕೊಡುವುದು ಸೇರಿದಂತೆ ಇನ್ನಿತರೆ ಜನಸ್ನೇಹಿ ಕಾರ್ಯಕ್ರಮಗಳನ್ನು ತಂದಿದ್ದೇವೆ. ಇಂತಹದ್ದೊಂದು ಯೋಜನೆ, ಸೌಲಭ್ಯ ಬಿಜೆಪಿ ಸರ್ಕಾರವಿದ್ದಾಗ ತಂದಿದೆಯೇ..? ಎಂದು ಪ್ರಶ್ನೆ ಮಾಡಿದರು.
ಬಿಜೆಪಿ, ಜೆಡಿಎಸ್ ನವರೇ ಬಡವರು, ರೈತರಿಗೆ, ಮಹಿಳೆಯರಿಗೆ, ನಿರುದ್ಯೋಗಸ್ಥರಿಗೆ ಏನು ಮಾಡಿದ್ದೀರಿ…? ಕಮಲ ಕೆಸರಿನಲ್ಲಿ ಇದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಈ “ಕೈ” ಅಧಿಕಾರದಲ್ಲಿದ್ದರೆ ಚೆಂದ ಎಂದರು.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…